ADVERTISEMENT

IPL 2022: ಪಂದ್ಯ ಗೆದ್ದರೂ ಬ್ಯಾಟಿಂಗ್ ಬಗ್ಗೆ ರಾಹುಲ್ ಅಸಮಾಧಾನ

ಪಿಟಿಐ
Published 30 ಏಪ್ರಿಲ್ 2022, 10:20 IST
Last Updated 30 ಏಪ್ರಿಲ್ 2022, 10:20 IST
ಕೆ.ಎಲ್. ರಾಹುಲ್
ಕೆ.ಎಲ್. ರಾಹುಲ್   

ಪುಣೆ: ಐಪಿಎಲ್ ಟ್ವೆಂಟಿ-20 ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ 20 ರನ್ ಅಂತರದ ಗೆಲುವು ದಾಖಲಿಸಿದೆ.

ಪಂಜಾಬ್ ವಿರುದ್ಧ ಪಂದ್ಯ ಗೆದ್ದರೂ ಲಖನೌ ನಾಯಕ ರಾಹುಲ್, ತಂಡದ ಕಳಪೆ ಬ್ಯಾಟಿಂಗ್ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

ಮೊದಲ ಇನ್ನಿಂಗ್ಸ್‌ನ ಕೊನೆಯಲ್ಲಿ ಬ್ಯಾಟಿಂಗ್ ಮಾಡಿದ ರೀತಿಯ ಬಗ್ಗೆ ನಿರಾಶೆಗೊಂಡಿದ್ದೇನೆ. ಇದು ಮೂರ್ಖತನದ ಕ್ರಿಕೆಟ್ ಆಗಿತ್ತು ಎಂದು ಹೇಳಿದ್ದಾರೆ.

ಬ್ಯಾಟಿಂಗ್‌ನಲ್ಲಿ ಉತ್ತಮ ನಿರ್ವಹಣೆ ನೀಡಬೇಕಿದೆ. ಕ್ವಿಂಟನ್ ಡಿ ಕಾಕ್ ಹಾಗೂ ದೀಪಕ್ ಹೂಡಾ ಉತ್ತಮ ಜೊತೆಯಾಟ ಕಟ್ಟಿದರು. ನಾವು ಸ್ಮಾರ್ಟ್ ಕ್ರಿಕೆಟ್ ಆಡಿದ್ದರೆ 180-190 ರನ್ ಗಳಿಸಬಹುದಿತ್ತು ಎಂದು ತಿಳಿಸಿದ್ದಾರೆ.

ಪಂದ್ಯವನ್ನು ಗ್ರಹಿಸುವಲ್ಲಿ ನಾವು ಮತ್ತಷ್ಟು ಚುರುಕಾಗಿರಬೇಕು. ಕೆಟ್ಟ ಹೊಡೆತಗಳನ್ನು ಆಡದಿದ್ದರೆ ಉತ್ತಮ ಮೊತ್ತ ಕಲೆ ಹಾಕಬಹುದಿತ್ತು. ಆದರೂ ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಉತ್ತಮ ನಿರ್ವಹಣೆ ನೀಡಿದ್ದೇವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.