ADVERTISEMENT

ರಣಜಿ ಗೆಲ್ಲುವ ವಿಶ್ವಾಸ ಇದೆ: ರೋಜರ್ ಬಿನ್ನಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 19:55 IST
Last Updated 23 ಫೆಬ್ರುವರಿ 2020, 19:55 IST
ರೋಜರ್ ಬಿನ್ನಿ
ರೋಜರ್ ಬಿನ್ನಿ   

ದಾವಣಗೆರೆ: ಕರ್ನಾಟಕ ತಂಡ ರಣಜಿ ಟೂರ್ನಿಯಲ್ಲಿ ಉತ್ತಮವಾಗಿ ಆಡುತ್ತಿದ್ದು, ಟ್ರೋಫಿ ಗೆಲ್ಲಲಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ಬಾಪೂಜಿ ಎಂಬಿಎ ಕಾಲೇಜು ಸಭಾಂಗಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಐದಾರು ಆಟಗಾರರು
ರಾಷ್ಟ್ರೀಯ ತಂಡದ ಬಾಗಿಲು ಬಡಿ ಯಲು ಸಿದ್ಧರಾಗಿದ್ದಾರೆ. ದೇವದತ್ತ ಪಡಿ ಕ್ಕಲ್ ಉತ್ತಮವಾಗಿ ಆಸುತ್ತಿದ್ದಾರೆ’ ಎಂದರು.

‘ಒಂದೂವರೆ ವರ್ಷದಲ್ಲಿ ಜೆ.ಎಚ್. ಪಟೇಲ್ ಬಡಾವಣೆಯ ಕ್ರಿಕೆಟ್ ಮೈದಾನವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಿ ರಣಜಿ ಮತ್ತು ಕೆಪಿಎಲ್ ಪಂದ್ಯಗಳನ್ನು ಆಯೋಜಿಸುತ್ತೇವೆ. ದಾವಣಗೆರೆಯಲ್ಲಿ ಟರ್ಫ್ ಪಿಚ್ ಸಿದ್ಧ ಪಡಿಸಿದ ನಂತರ ಗದಗ, ಹಾಸನದಲ್ಲಿ ನಿರ್ಮಿಸುವ ಉದ್ದೇಶ ಇದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.