ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಸಂಸ್ಥೆ ತಂಡ, ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ (ಕೆಎಸ್ಎಫ್ಎ) ಆಶ್ರಯದಲ್ಲಿ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್ಬಾಲ್ ಟೂರ್ನಿಯಲ್ಲಿ ಶುಭಾರಂಭ ಮಾಡಿತು.
ಕೆಎಸ್ಎಫ್ಎ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ದಕ್ಷಿಣ ಕನ್ನಡ 2–0 ಗೋಲುಗಳಿಂದ ಮಂಡ್ಯ ಜಿಲ್ಲಾ ಫುಟ್ಬಾಲ್ ಸಂಸ್ಥೆ ತಂಡವನ್ನು ಮಣಿಸಿತು.
ಮೊಹಮ್ಮದ್ ಆಶಿಕ್ (19ನೇ ನಿ.) ಮತ್ತು ವಿಜೀತ್ (51) ಅವರು ಗೋಲು ಗಳಿಸಿ ತಮ್ಮ ತಂಡದ ಗೆಲುವಿಗೆ ಕಾರಣರಾದರು.
ಶನಿವಾರದ ಪಂದ್ಯದಲ್ಲಿ ಮಂಡ್ಯ– ಬೆಳಗಾವಿ ಪೈಪೋಟಿ ನಡೆಸಲಿವೆ. ಒಟ್ಟು ಆರು ತಂಡಗಳು ಅಂತರ ಜಿಲ್ಲಾ ಟೂರ್ನಿಯ ಅಂತಿಮ ಸುತ್ತಿನಲ್ಲಿ ಪಾಲ್ಗೊಂಡಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.