ADVERTISEMENT

ಸಂತೋಷ್ ಟ್ರೋಫಿ: ರಾಜ್ಯಕ್ಕೆ ಪುದುಚೇರಿ ಮೊದಲ ಎದುರಾಳಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2019, 16:02 IST
Last Updated 24 ಅಕ್ಟೋಬರ್ 2019, 16:02 IST

ಬೆಂಗಳೂರು: ಸಂತೋಷ್ ಟ್ರೋಫಿ ಫುಟ್‌ಬಾಲ್ ಟೂರ್ನಿಯ ದಕ್ಷಿಣ ವಲಯ ಅರ್ಹತಾ ಸುತ್ತಿನ ಪಂದ್ಯಗಳು ನವೆಂಬರ್ 5ರಿಂದ ಕೇರಳದಲ್ಲಿ ನಡೆಯಲಿವೆ. ಕರ್ನಾಟಕ ತನ್ನ ಮೊದಲ ಪಂದ್ಯವನ್ನು 6ರಂದು ಪುದುಚೇರಿ ವಿರುದ್ಧ ಆಡಲಿದೆ.

ರಾಜ್ಯ ತಂಡ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು ಪುದುಚೇರಿ ಮತ್ತು ತೆಲಂಗಾಣ ತಂಡಗಳು ಇದೇ ಗುಂಪಿನಲ್ಲಿವೆ. ‘ಎ’ ಗುಂಪಿನಲ್ಲಿ ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡು ತಂಡಗಳಿವೆ. 5ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಕೇರಳ ಮತ್ತು ಆಂಧ್ರಪ್ರದೇಶ ತಂಡಗಳು ಸೆಣಸಲಿವೆ. ಕರ್ನಾಟಕದ ಎರಡನೇ ಪಂದ್ಯ 8ರಂದು ತೆಲಂಗಾಣ ವಿರುದ್ಧ ನಡೆಯಲಿದೆ.

ಪ್ರತಿ ಗುಂಪಿನ ಚಾಂಪಿಯನ್ ಅಂತಿಮ ಸುತ್ತಿನ ಪಂದ್ಯಗಳಲ್ಲಿ ಪಾಲ್ಗೊಳ್ಳಲು ಅರ್ಹತೆ ಗಳಿಸಲಿವೆ ಎಂದು ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.