ADVERTISEMENT

ಫುಟ್‌ಬಾಲ್‌: ಆನಂದು ಹ್ಯಾಟ್ರಿಕ್‌

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2019, 19:45 IST
Last Updated 8 ಸೆಪ್ಟೆಂಬರ್ 2019, 19:45 IST
ಪುದುಚೇರಿ ಮತ್ತು ತೆಲಂಗಾಣ ತಂಡದ ಆಟಗಾರರು ಚೆಂಡಿಗಾಗಿ ಪೈಪೋಟಿ ನಡೆಸಿದರು –‍ಪ್ರಜಾವಾಣಿ ಚಿತ್ರ
ಪುದುಚೇರಿ ಮತ್ತು ತೆಲಂಗಾಣ ತಂಡದ ಆಟಗಾರರು ಚೆಂಡಿಗಾಗಿ ಪೈಪೋಟಿ ನಡೆಸಿದರು –‍ಪ್ರಜಾವಾಣಿ ಚಿತ್ರ   

ಬೆಂಗಳೂರು: ಪಿ.ವಿ.ಆನಂದು ಕೃಷ್ಣಾ ಗಳಿಸಿದ ಹ್ಯಾಟ್ರಿಕ್‌ ಗೋಲುಗಳ ನೆರವಿನಿಂದ ಪುದುಚೇರಿ ತಂಡ ಕರ್ನಾಟಕ ರಾಜ್ಯ ಫುಟ್‌ಬಾಲ್‌ ಸಂಸ್ಥೆ (ಕೆಎಸ್‌ಎಫ್‌ಎ) ಆಶ್ರಯದ ರಾಷ್ಟ್ರೀಯ ಸಬ್‌ ಜೂನಿಯರ್‌ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಗೆದ್ದಿದೆ.

ಅಶೋಕನಗರದಲ್ಲಿರುವ ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ‘ಬಿ’ ಗುಂಪಿನ ಪೈಪೋಟಿಯಲ್ಲಿ ಪುದುಚೇರಿ 3–2 ಗೋಲುಗಳಿಂದ ತೆಲಂಗಾಣ ತಂಡವನ್ನು ಪರಾಭವಗೊಳಿಸಿತು.

ಪುದುಚೇರಿ ತಂಡಕ್ಕೆ ಆರಂಭದಲ್ಲೇ ಹಿನ್ನಡೆ ಎದುರಾಯಿತು. ಐದನೇ ನಿಮಿಷದಲ್ಲಿ ಈ ತಂಡದ ಎಸ್‌.ಅನ್ಬರಸನ್‌ ಅವರು ಚೆಂಡನ್ನು ತಮ್ಮದೇ ಗೋಲುಪೆಟ್ಟಿಗೆಯೊಳಗೆ ಒದ್ದರು. ಹೀಗಾಗಿ ತೆಲಂಗಾಣ ತಂಡದ ಖಾತೆಗೆ ‘ಉಡುಗೊರೆ’ ಗೋಲು ಸೇರ್ಪಡೆಯಾಯಿತು.

ADVERTISEMENT

ನಂತರ ಆನಂದು, ಕಾಲ್ಚಳಕ ತೋರಿದರು. ಅವರು 17, 35 ಮತ್ತು 46ನೇ ನಿಮಿಷಗಳಲ್ಲಿ ಚೆಂಡನ್ನು ಗುರಿ ಸೇರಿಸಿ 3–1 ಮುನ್ನಡೆಗೆ ಕಾರಣರಾದರು. 49ನೇ ನಿಮಿಷದಲ್ಲಿ ಗೋಲು ಹೊಡೆದ ತೆಲಂಗಾಣ ತಂಡದ ಸೈಯದ್‌ ಇಮ್ತಿಯಾಜ್‌ ಅಹಮದ್‌, ಹಿನ್ನಡೆ ತಗ್ಗಿಸಲಷ್ಟೇ ಶಕ್ತರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.