ADVERTISEMENT

ಟಿಟಿ: ಆಕಾಶ್, ಕರುಣಾಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 26 ಮೇ 2019, 19:17 IST
Last Updated 26 ಮೇ 2019, 19:17 IST

ಬೆಂಗಳೂರು: ಆಕಾಶ್ ಕೆ.ಜೆ ಮತ್ತು ಕರುಣಾ, ಇಲ್ಲಿ ನಡೆದ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಸಬ್‌ ಜೂನಿಯರ್ ಬಾಲಕ ಮತ್ತು ಬಾಲಕಿಯರ ವಿಭಾಗದ ಪ್ರಶಸ್ತಿ ಗೆದ್ದರು.

ಮಲ್ಲೇಶ್ವರಂ ಅಸೋಸಿಯೇಷನ್‌ ಆಯೋಜಿಸಿದ್ದ ಟೂರ್ನಿಯ ಫೈನಲ್‌ನಲ್ಲಿ ಆಕಾಶ್‌ 12–10, 9–11, 11–8, 11–5ರಲ್ಲಿ ಸುಜನ್ ಭಾರದ್ವಾಜ್‌ ಎದುರು ಗೆದ್ದರು. ಕರುಣಾ, ರೈನಾ ನರ ಅವರನ್ನು 11–5, 11–5, 11–10ರಲ್ಲಿ ಸೋಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT