ಬೆಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪುರುಷರ ತಂಡವುರಾಜ್ಯಮಟ್ಟದ ಶಿವಕುಮಾರ ಸ್ವಾಮೀಜಿ ಕಪ್ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತುಮುಕೂರಿನಲ್ಲಿ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಕ್ರಿಯೆಟಿವ್ ಇವೆಂಟ್ಸ್ ಸಹಯೋಗದಲ್ಲಿ ಟೂರ್ನಿ ನಡೆಯಿತು.
ಶನಿವಾರ ನಡೆದ ಫೈನಲ್ ಹಣಾಹಣಿಯಲ್ಲಿ ಆಳ್ವಾಸ್ ತಂಡವು 35–22, 35–19ರಿಂದ ಬೆಂಗಳೂರಿನ ಸ್ಕಾಲ್ವಿ ಆಸ್ಟ್ರಾ ತಂಡವನ್ನು ಪರಾಭವಗೊಳಿಸಿತು. ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.