ಬೆಂಗಳೂರು: ರಾಜ್ಯದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಂಡ್ಯ (ಆಗಸ್ಟ್ 28ರಿಂದ 31), ಶಿವಮೊಗ್ಗ (ಸೆಪ್ಟೆಂಬರ್ 7ರಿಂದ 10) ಹಾಗೂ ಬೆಳಗಾವಿಯಲ್ಲಿ (ಅಕ್ಟೋಬರ್ 3ರಿಂದ 6) ನಡೆಸಲು ಉದ್ದೇಶಿಸಿದ್ದ ಕರ್ನಾಟಕ ಬ್ಯಾಸ್ಕೆಟ್ಬಾಲ್ ಲೀಗ್ ಅನ್ನು ಮುಂದೂಡಲಾಗಿದೆ.
ಈ ವಿಷಯವನ್ನು ಕರ್ನಾಟಕ ರಾಜ್ಯ ಬ್ಯಾಸ್ಕೆಟ್ಬಾಲ್ ಸಂಸ್ಥೆ (ಕೆಎಸ್ಬಿಎ) ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.