
ಪ್ರಜಾವಾಣಿ ವಾರ್ತೆ
ಪೀಣ್ಯ, ದಾಸರಹಳ್ಳಿ: ಬಹ್ರೇನ್ನಲ್ಲಿ ನಡೆಯಲಿರುವ ಮೂರನೇ ಏಷ್ಯನ್ ಯೂತ್ ಗೇಮ್ಸ್ ಈಜು ಸ್ಪರ್ಧೆ ವಿಭಾಗದಲ್ಲಿ ಶೆಟ್ಟಿಹಳ್ಳಿಯ ಸರ್.ಎಂ. ವಿಶ್ವೇಶ್ವರಯ್ಯ ವಿದ್ಯಾನಿಕೇತನ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಚರಿತ ಪಣೀಂದ್ರನಾಥ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಶಾಲೆಯ ಆಡಳಿತಾಧಿಕಾರಿ ಆರೋಗ್ಯಪ್ಪ ಮಾತನಾಡಿ, ‘ನಮ್ಮ ಶಾಲೆಯ ವಿದ್ಯಾರ್ಥಿನಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಕಠಿಣ ಶ್ರಮದಿಂದ ಅಮೋಘ ಸಾಧನೆ ಮಾಡುವ ಮೂಲಕ ಚರಿತಾ ಪದಕ ಗೆದ್ದು ಬರಲಿ’ ಎಂದು ಹಾರೈಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.