ಬರ್ಮಿಂಗ್ಹ್ಯಾಮ್: ಭಾರತ ಪುರುಷರ ಟೇಬಲ್ ಟೆನಿಸ್ ತಂಡವು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಚಿನ್ನ ಗೆದ್ದಿದೆ.
ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಅನುಭವಿ ಶರತ್ ಕಮಲ್, ಜಿ.ಸತ್ಯನ್, ಹರ್ಮೀತ್ ದೇಸಾಯಿ ಒಳಗೊಂಡ ಭಾರತ ತಂಡವು ಸಿಂಗಾಪುರ ತಂಡವನ್ನು 3-1 ಅಂತರದಿಂದ ಮಣಿಸಿತು.
ಸೋಮವಾರ ರಾತ್ರಿ ನಡೆದ ನಾಲ್ಕರ ಘಟ್ಟದ ಪಂದ್ಯದಲ್ಲಿ ಭಾರತ 3–0ಯಿಂದ ನೈಜೀರಿಯಾ ತಂಡಕ್ಕೆ ಸೋಲುಣಿಸಿ ಫೈನಲ್ಗೆ ಲಗ್ಗೆಯಿಟ್ಟಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.