ADVERTISEMENT

ಗಾಲ್ಫ್‌ನಲ್ಲಿ ಅದೃಷ್ಟ ಪರೀಕ್ಷೆಗಿಳಿದ ಮುರಳಿ ವಿಜಯ್

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 2:47 IST
Last Updated 23 ಆಗಸ್ಟ್ 2022, 2:47 IST

ಚೆನ್ನೈ (ಪಿಟಿಐ): ಭಾರತ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ತಮಿಳುನಾಡಿನ ಬ್ಯಾಟರ್‌ ಮುರಳಿ ವಿಜಯ್‌ ಅವರು ಗಾಲ್ಫ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಮಂಗಳವಾರ ಇಲ್ಲಿ ಆರಂಭವಾಗಲಿರುವ ಚೆನ್ನೈ ಓಪನ್‌ ಗಾಲ್ಫ್‌ ಚಾಂಪಿಯನ್‌ಷಿಪ್‌ನಲ್ಲಿ ಅಮೆಚೂರ್‌ ಆಟಗಾರನಾಗಿ ಅವರು ಕಣಕ್ಕಿಳಿಯಲಿದ್ದಾರೆ. ಹಿರಿಯ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್‌ ಅವರ ಪುತ್ರ ಅನಿರುದ್ಧ ಶ್ರೀಕಾಂತ್‌ ಅವರೂ ಅಮೆಚೂರ್‌ ಸ್ಪರ್ಧಿಯಾಗಿ ಪಾಲ್ಗೊಳ್ಳಲಿದ್ದಾರೆ.

ತಮಿಳುನಾಡು ಗಾಲ್ಫ್‌ ಫೆಡರೇಷನ್‌ ಕೋರ್ಸ್‌ನಲ್ಲಿ ನಡೆಯಲಿರುವ ಟೂರ್ನಿಯಲ್ಲಿ 123 ವೃತ್ತಿಪರ ಆಟಗಾರರು ಮತ್ತು ಮೂವರು ಅಮೆಚೂರ್‌ ಸ್ಪರ್ಧಿಗಳು ಕಣದಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.