ಚಂಡೀಗಡ (ಪಿಟಿಐ):ಟೋಕಿಯೊ ಒಲಿಂಪಿಕ್ಸ್ ಕುಸ್ತಿಯಲ್ಲಿ ಬೆಳ್ಳಿಪದಕ ಜಯಿಸಿದ ರವಿಕುಮಾರ್ ದಹಿಯಾ ಅವರ ಸೋನಿಪತ್ ಸಮೀಪದ ನಹ್ರಿಯಲ್ಲಿರುವ ಮನೆಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಭೇಟಿ ನೀಡಿದರು.
ರವಿಯವರ ಅಪ್ಪ, ಅಮ್ಮನನ್ನು ಭೇಟಿಯಾದರು. ರವಿಯ ಕುಸ್ತಿಯ ಪ್ರತಿಭೆಯನ್ನು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ಹಾಜರಿದ್ದ ನಹ್ರಿ ಗ್ರಾಮ ಪಂಚಾಯಿತಿಯವರು ಊರಿನಲ್ಲಿರುವ ಕೆಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಂತೆ ಖಟ್ಟರ್ ಅವರಿಗೆ ಮನವಿಪತ್ರ ಸಲ್ಲಿಸಿದರು. ಅದನ್ನು ಸ್ವೀಕರಿಸಿದ ಪರಿಹಾರ ಕಾರ್ಯಗಳಿಗೆ ಕೂಡಲೇ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.