ಬೆಂಗಳೂರು: ಕರ್ನಾಟಕ ರಾಜ್ಯ ವೇಟ್ಲಿಫ್ಟರ್ಸ್ ಸಂಸ್ಥೆಯ (ಕೆಎಸ್ಡಬ್ಲ್ಯುಎ) ಅಧ್ಯಕ್ಷರಾಗಿ ಡಾ.ಪಿ.ದಯಾನಂದ ಪೈ ಅವರುಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಕೆಎಸ್ಡಬ್ಲ್ಯುಎ ಸಾಮಾನ್ಯ ಸಭೆ ಮತ್ತು ಚುನಾವಣೆಯಲ್ಲಿ ಕಾರ್ಯಕಾರಿ ಅಧ್ಯಕ್ಷರಾಗಿ ಡಿ.ಚಂದ್ರಹಾಸ್ ರಾಯ್, ಗೌರವ ಕಾರ್ಯದರ್ಶಿಯಾಗಿ ಎಸ್.ಎಚ್. ಆನಂದ ಗೌಡ, ಖಜಾಂಚಿಯಾಗಿ ಶ್ಯಾಮಲಾ ಶೆಟ್ಟಿ ಹಾಗೂ ಜಂಟಿ ಕಾರ್ಯದರ್ಶಿಯಾಗಿ ಪ್ರಮೋದ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಇವರ ಅಧಿಕಾರವಧಿಯು 2019ರಿಂದ 2022ರವರೆಗೆ ಮುಂದುವರೆಯುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.