
ಬೆಂಗಳೂರು: ಅಥರ್ವ ನವರಂಗೆ ಹಾಗೂ ಕೈರಾ ಬಾಳಿಗಾ ಅವರು ಡಾ.ಎಂ.ಎಸ್.ರಾಮಯ್ಯ ಸ್ಮರಣಾರ್ಥ ನಡೆಯುತ್ತಿರುವ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯ 17 ವರ್ಷದೊಳಗಿವರ ವಿಭಾಗದಲ್ಲಿ ಕ್ರಮವಾಗಿ ಬಾಲಕರ ಮತ್ತು ಬಾಲಕಿಯರ ಸಿಂಗಲ್ಸ್ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಟೂರ್ನಿಯ 17 ವರ್ಷದೊಳಗಿನ ಬಾಲಕರ ವಿಭಾಗದ ಫೈನಲ್ನಲ್ಲಿ ಅಥರ್ವ ಅವರು 3–2ರಿಂದ (3–11, 9–11, 11–6, 11–5, 11–6) ಗೌರವ್ ಗೌಡ ವಿರುದ್ಧ ರೋಚಕ ಜಯ ಸಾಧಿಸಿದರು. ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡು ಪ್ರಶಸ್ತಿ ಎತ್ತಿಹಿಡಿದರು.
ಇದಕ್ಕೆ ಮೊದಲು ನಡೆದ ಸೆಮಿಫೈನಲ್ ಪಂದ್ಯಗಳಲ್ಲಿ ಗೌರವ್ ಅವರು 1–8, 5–11, 11–4, 11–6ರಿಂದ ಆರ್ಯ ಎ. ಜೈನ್ ವಿರುದ್ಧ ಹಾಗೂ ಅಥರ್ವ ಅವರು 11–9, 11–9, 15–13ರಿಂದ ಶುಭಂ ತ್ರಿವೇದಿ ವಿರುದ್ಧ ಗೆಲುವು ಸಾಧಿಸಿದ್ದರು.
ಬಾಲಕಿಯರ ವಿಭಾಗದ ಪ್ರಶಸ್ತಿ ಸುತ್ತಿನಲ್ಲಿ ಕೈರಾ ಅವರು 11–5, 11–9, 6–11, 11–9ರಿಂದ ಹಿಮಾಂಶಿ ಚೌಧರಿ ಅವರನ್ನು ಮಣಿಸಿದರು. ನಾಲ್ಕರ ಘಟ್ಟದಲ್ಲಿ ಹಿಮಾಂಶಿ 11–6, 14–12, 11–2ರಿಂದ ರಾಶಿ ವಿ. ರಾವ್ ಎದುರು ಹಾಗೂ ಕೈರಾ 11–8, 7–11, 11–6, 11–9ರಿಂದ ಶಿವಾನಿ ಮಹೇಂದ್ರನ್ ಎದುರು ಜಯ ಸಾಧಿಸಿದ್ದರು.
ಟೂರ್ನಿಯು ದೊಡ್ಡಬಳ್ಳಾಪುರದ ಹಿಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.