ನವದೆಹಲಿ: ಟೋಕಿಯೊ 2020 ಪ್ಯಾರಾಲಿಂಪಿಕ್ಸ್ ಕಂಚಿನ ಪದಕ ವಿಜೇತ ಶರದ್ ಕುಮಾರ್ ಹೃದಯದಲ್ಲಿ ಊತ ಇರುವುದು ಪತ್ತೆಯಾಗಿದೆ. ಅವರನ್ನು ಎರಡು ದಿನಗಳ ಹಿಂದೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ದಾಖಲಿಸಲಾಗಿತ್ತು.
ಎದೆಯಲ್ಲಿ ನೋವು ಕಾಣಿಸಿಕೊಂಡ ನಂತರ ಶರದ್ ಕುಮಾರ್ ಅವರನ್ನು ಏಮ್ಸ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರ ಹೃದಯದಲ್ಲಿ ಊತ ಇರುವುದು ಪತ್ತೆಯಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಫೋಟೊವನ್ನು ಟ್ವಿಟ್ ಮಾಡಿಕೊಂಡಿರುವ ಶರದ್ ಕುಮಾರ್, 'ಕಠಿಣ ಸಮಯವು ನಮ್ಮನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದೇನೆ' ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಾಲಿಂಪಿಕ್ಸ್ನ ಪುರುಷರ ಹೈ ಜಂಪ್ನಲ್ಲಿ ಶರದ್ ಕುಮಾರ್ ಕಂಚಿನ ಪದಕ ಪಡೆದಿದ್ದಾರೆ.
2014 ಮತ್ತು 2018ರ ಪ್ಯಾರಾ ಏಷ್ಯನ್ ಗೇಮ್ಸ್ಗಳೆರಡಲ್ಲೂ ಸ್ವರ್ಣ ಪದಕದ ಸಾಧನೆಯನ್ನು ಶರದ್ ಕುಮಾರ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.