ಹರಪನಹಳ್ಳಿ:ಚಿಕ್ಕ ವಯಸ್ಸಿನಲ್ಲೇ ಅಂತರರಾಷ್ಟ್ರೀಯ ಕಬಡ್ಡಿ ಟೂರ್ನಿಯಲ್ಲಿ ಆಡಿ ಚಿನ್ನ ಗೆದ್ದಿದ್ದ ಹರಪನಹಳ್ಳಿಯ ಎಲ್.ಅಶೋಕ್ ತಾಲ್ಲೂಕಿನ ತೊಗರಿಕಟ್ಟೆ ಬಳಿ ಬುಧವಾರ ಸಂಜೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಬಾಪೂಜಿನಗರದ ನಿವಾಸಿ ಅಶೋಕ (22) ಆ.29, 30ರಂದು ನೇಪಾಳದ ಕಠ್ಮಂಡುವಿನಲ್ಲಿ ಆಯೋಜಿಸಿದ್ದ 22 ವರ್ಷದೊಳಗಿನವರ ಸಾರ್ಕ್ ಸೌತ್ ವೆಸ್ಟ್ ಏಷ್ಯನ್ ಅಂತರ ರಾಷ್ಟ್ರೀಯ ಕಬಡ್ಡಿ ಚಾಂಪಿಯನಷಿಪ್ನಲ್ಲಿ ದೇಶವನ್ನು ಪ್ರತಿನಿಧಿಸಿದ್ದರು.
ಹಿಂಬದಿ ಸವಾರ ಶಿವನಾಯ್ಕ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಎಸ್ಸಿ ವ್ಯಾಸಂಗ ಮಾಡುತ್ತಿದ್ದ ಅಶೋಕ್ ಮಂಗಳವಾರ ಕಂಪ್ಯೂಟರ್ ಸೈನ್ಸ್ ಪರೀಕ್ಷೆ ಬರೆದಿದ್ದರು. ಬುಧವಾರ ಇಂಗ್ಲಿಷ್ ಪರೀಕ್ಷೆಗೆ ಹಾಜರಾಗಬೇಕಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.