ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಪ್ರಶಸ್ತಿ ಗೆದ್ದ ಪಿ.ವಿ.ಸಿಂಧು ಅವರಿಗೆ ನಟ ಅಕ್ಕಿನೇನಿ ನಾಗಾರ್ಜುನ ದುಬಾರಿ ಕೊಡುಗೆ ನೀಡಿದ್ದಾರೆ.
ತೆಲಂಗಾಣ ಬ್ಯಾಡ್ಮಿಂಟನ್ ಅಸೋಷಿಯೇಷನ್ ಅಧ್ಯಕ್ಷ ಚಾಮುಂಡೇಶ್ವರಿನಾಥ್ ಹಾಗೂ ನಟ ನಾಗಾರ್ಜುನ ಒಟ್ಟಾಗಿ, ಬಿಎಂಡಬ್ಲು ಸರಣಿಯ ದುಬಾರಿ ಕಾರ್ ಒಂದನ್ನು ಉಡುಗೊರೆ ನೀಡಿದ್ದಾರೆ.
ಅನ್ನಪೂರ್ಣ ಸ್ಟುಡಿಯೋದಲ್ಲಿ ನಡೆದ ಅದ್ದೂರಿ ಸಮಾರಂಭವೊಂದರಲ್ಲಿ ಆಟಗಾರ್ತಿ ಸಿಂಧುಗೆ ಅಭಿನಂದನೆ ಸಲ್ಲಿಸಲಾಯಿತು. ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದ ಸಂದರ್ಭದಲ್ಲಿ ಸಿಂಧು ಅವರಿಗೆ ಸಚಿನ್ ತೆಂಡೂಲ್ಕರ್ ಕೂಡ ದುಬಾರಿ ಕಾರು ಉಡುಗೊರೆ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.