ADVERTISEMENT

ಕ್ರೀಡಾ ಪ್ರಶಸ್ತಿ ವಿಜೇತರ ಆಯ್ಕೆಗೆ 17ರಂದು ಸಭೆ

ಪಿಟಿಐ
Published 15 ಆಗಸ್ಟ್ 2020, 14:39 IST
Last Updated 15 ಆಗಸ್ಟ್ 2020, 14:39 IST
ವೀರೇಂದ್ರ ಸೆಹ್ವಾಗ್‌
ವೀರೇಂದ್ರ ಸೆಹ್ವಾಗ್‌   

ನವದೆಹಲಿ: ಈ ವರ್ಷದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ವಿಜೇತರ ಆಯ್ಕೆಯಾಗಿಆಗಸ್ಟ್‌ 17 ಹಾಗೂ 18ರಂದು ಸಭೆಯು ನಡೆಯಲಿದೆ. ಕ್ರೀಡಾ ಸಚಿವಾಲಯವು ರಚಿಸಿರುವ12 ಜನರ ಆಯ್ಕೆ ಸಮಿತಿಯು ವಿಜೇತರನ್ನು ನಿರ್ಧರಿಸಲಿದೆ. ಇಲ್ಲಿಯ ಭಾರತ ಕ್ರೀಡಾ ಪ್ರಾಧಿಕಾರ (ಸಾಯ್‌) ಮುಖ್ಯ ಕಚೇರಿಯಲ್ಲಿ ಸಭೆ ನಡೆಯಲಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮುಕುಂದಕಂ ಶರ್ಮಾ ಅವರ ನೇತೃತ್ವದ ಸಮಿತಿಯಲ್ಲಿಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಸ್ಫೋಟಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಮತ್ತು ಹಾಕಿ ದಿಗ್ಗಜ ಸರ್ದಾರ್ ಸಿಂಗ್, ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗಳಿಸಿರುವ ದೀಪಾ ಮಲಿಕ್ಇದ್ದಾರೆ. ಟೇಬಲ್ ಟೆನಿಸ್ಮಾಜಿ ಆಟಗಾರ್ತಿ ಮೊನಾಲಿಸಾ ಬರುವಾ ಮೆಹ್ತಾ, ಬಾಕ್ಸರ್‌ ವೆಂಕಟೇಶನ್ ದೇವರಾಜನ್ ಹಾಗೂ ಕ್ರೀಡಾ ಪತ್ರಕರ್ತ ಆಲೋಕ್ ಸಿನ್ಹಾ ಅವರೂ ಸಮಿತಿಯಲ್ಲಿದ್ದಾರೆ.

ಭಾರತ ಕ್ರೀಡಾ ಪ್ರಾಧಿಕಾರದ ಮಹಾನಿರ್ದೇಶಕ ಸಂದೀಪ್ ಪ್ರಧಾನ್, ಜಂಟಿ ಕಾರ್ಯದರ್ಶಿ ಎಲ್‌.ಎಸ್‌.ಸಿಂಗ್ ಮತ್ತು ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ರಾಜಗೋಪಾಲನ್ ಕೂಡ ಇದ್ದಾರೆ.

ADVERTISEMENT

ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸುಗೊಂಡವರ ಪರಿಗಣನೆಗಾಗಿ ಈ ಹಿಂದೆ ಆ ಪ್ರಶಸ್ತಿ ವಿಜೇತ ಇಬ್ಬರು ಸದಸ್ಯರನ್ನು ಅಧ್ಯಕ್ಷರು ಸಭೆಗೆ ಆಹ್ವಾನಿಸಬಹುದು.

‘ಆಗಸ್ಟ್‌ 17 ಹಾಗೂ 18ರಂದು ಸಭೆ ನಡೆಯಲಿದೆ. ಆಗಸ್ಟ್‌ 29ರಂದು ಪ್ರಶಸ್ತಿ ಪ್ರದಾನ ಸಮಾರಂಭವು ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಆದರೆ ಈ ವರ್ಷದ ಪ್ರಶಸ್ತಿ ವಿಜೇತರನ್ನಂತೂ ಪ್ರಕಟಿಸಲಾಗುತ್ತದೆ’ ಎಂದು ಕ್ರೀಡಾ ಸಚಿವಾಲಯದ ಮೂಲಗಳು ತಿಳಿಸಿವೆ.

ಈ ಬಾರಿಯೂ ಒಂದೇ ಸಮಿತಿಯ ಮೂಲಕ ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.