ಕ್ಯಾಲ್ಗರಿ (ಕೆನಡಾ): ಭಾರತದ ಅನುಭವಿ ಆಟಗಾರ ಕಿದಂಬಿ ಶ್ರೀಕಾಂತ್ ಅವರು ಇಲ್ಲಿ ನಡೆಯುತ್ತಿರುವ ಕೆನಡಾ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಿಯ ಸಿಂಗಲ್ಸ್ನಲ್ಲಿ ಎರಡನೇ ಸುತ್ತು ಪ್ರವೇಶಿಸಿದರು.
ಶ್ರೀಕಾಂತ್ ಅವರು, ಬುಧವಾರ ನಡೆದ ಪಂದ್ಯದಲ್ಲಿ ಸ್ವದೇಶದ ಪ್ರಿಯಾಂಶು ರಾಜಾವತ್ ಅವರನ್ನು 18–21, 21–19, 21–14ರಿಂದ ಮಣಿಸಿದರು. ರೋಚಕ ಹಣಾಹಣಿಯಿಂದ ಕೂಡಿದ್ದ ಈ ಪಂದ್ಯದಲ್ಲಿ ಶ್ರೀಕಾಂತ್ ಅವರು ಮೊದಲ ಗೇಮ್ನಲ್ಲಿ ಹಿನ್ನಡೆ ಅನುಭವಿಸಿದರೂ, ಬಳಿಕ ಪುಟಿದೆದ್ದರು.
ಪ್ರಿಯಾಂಶು ಅವರು 2024ರಲ್ಲಿ ಈ ಟೂರ್ನಿಯ ಸೆಮಿಫೈನಲ್ ತಲುಪಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.