ADVERTISEMENT

ಬೀದರ್ | ಕತ್ತಿ ವರಸೆ ಕ್ರೀಡಾಕೂಟ; ಮಹಾರಾಷ್ಟ್ರ ರನ್ನರ್ ಅಪ್, ಕರ್ನಾಟಕ ಚಾಂಪಿಯನ್

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 13:35 IST
Last Updated 25 ನವೆಂಬರ್ 2021, 13:35 IST
ಬೀದರ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತ ಕತ್ತಿ ವರಸೆ ಕ್ರೀಡಾಕೂಟದಲ್ಲಿ ಚಾಂಪಿಯನ್ ಆದ ಕರ್ನಾಟಕ ತಂಡದ ಕ್ರೀಡಾಪಟುಗಳು
ಬೀದರ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಖಿಲ ಭಾರತ ಕತ್ತಿ ವರಸೆ ಕ್ರೀಡಾಕೂಟದಲ್ಲಿ ಚಾಂಪಿಯನ್ ಆದ ಕರ್ನಾಟಕ ತಂಡದ ಕ್ರೀಡಾಪಟುಗಳು   

ಬೀದರ್: ಅಖಿಲ ಭಾರತ ಕತ್ತಿ ವರಸೆ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

ರಾಜ್ಯದಲ್ಲೇ ಮೊದಲ ಬಾರಿಗೆ ಇಲ್ಲಿಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಕರ್ನಾಟಕವು 15 ಚಿನ್ನ, 5 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ಬಾಚಿಕೊಳ್ಳುವುದರೊಂದಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು.

6 ಚಿನ್ನ ಹಾಗೂ ಒಂದು ಬೆಳ್ಳಿ ಪದಕ ಜಯಿಸಿದ ಮಹಾರಾಷ್ಟ್ರ ತಂಡ ರನ್ನರ್ ಅಪ್‍ಗೆ ತೃಪ್ತಿ ಪಟ್ಟುಕೊಂಡಿತು. ನಾಲ್ಕು ಚಿನ್ನದ ಪದಕ ಗೆದ್ದ ಮಧ್ಯಪ್ರದೇಶ ತೃತೀಯ ಹಾಗೂ ಒಂದು ಬೆಳ್ಳಿ ಪದಕ ಪಡೆದ ಕೇರಳ ನಾಲ್ಕನೇ ಸ್ಥಾನ ಗಳಿಸಿತು.

ADVERTISEMENT

ನಾಲ್ಕು ರಾಜ್ಯಗಳ ಒಟ್ಟು 50 ಕ್ರೀಡಾಪಟಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ಕ್ರೀಡಾಪಟುಗಳ ಕಾದಾಟ, ಮ್ಯಾಟ್ ಕಟ್ಟಿಂಗ್ ಹಾಗೂ ಕತ್ತಿಯೊಂದಿಗೆ ಪ್ರದರ್ಶಿಸಿದ ಪ್ರಾತ್ಯಕ್ಷಿಕೆಗಳು ಪ್ರೇಕ್ಷಕರನ್ನು ಬೆರಗುಗೊಳಿಸಿದವು.

ಕರ್ನಾಟಕ ರಾಜ್ಯ ಸಮುರಾಯ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.