ಬೆಂಗಳೂರು: ತೆರೆಯ ಮೇಲೆ ಖಳನಾಯಕರ ವಿರುದ್ಧ ಸೆಣೆಸಾಡುತ್ತಿದ್ದ ನಟ ಕಿಚ್ಚ ಸುದೀಪ್, ಇದೀಗ ಚೆಸ್ ಗ್ರ್ಯಾಂಡ್ಮಾಸ್ಟರ್ ವಿಶ್ವನಾಥನ್ ಆನಂದ್ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ.
ನಟರಾದ ಅಮೀರ್ ಖಾನ್, ಕಿಚ್ಚ ಸುದೀಪ್, ರಿತೇಷ್ ದೇಶ್ಮುಖ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಜೂನ್ 13ರಂದು ಚೆಸ್ ಗ್ರ್ಯಾಂಡ್ಮಾಸ್ಟರ್ ವಿಶ್ವನಾಥನ್ ಆನಂದ್ ಅವರನ್ನು ಎದುರಿಸಲಿದ್ದಾರೆ. ಅಕ್ಷಯಪಾತ್ರ ಪ್ರತಿಷ್ಠಾನದ ಸಹಯೋಗದಲ್ಲಿ ಚೆಸ್.ಕಾಮ್ ‘ಚೆಕ್ಮೇಟ್ ಕೋವಿಡ್’ ಸೆಲೆಬ್ರಿಟಿ ಆವೃತ್ತಿಯನ್ನು ನಡೆಸುತ್ತಿದ್ದು, ಭಾನುವಾರ ಸಂಜೆ 5ರಿಂದ ರಾತ್ರಿ 8 ಗಂಟೆಯವರೆಗೆ ಐದು ಬಾರಿ ವಿಶ್ವಚಾಂಪಿಯನ್ ಆಗಿರುವ ವಿಶ್ವನಾಥನ್ ಆನಂದ್ ಅವರು ಎರಡು ಬ್ಯಾಚ್ಗಳಲ್ಲಿ ಅರ್ಧ ಗಂಟೆಗಳಂತೆ ಹಲವು ಗಣ್ಯರೊಂದಿಗೆ ಏಕಕಾಲದಲ್ಲಿ ಚೆಸ್ ಆಡಲಿದ್ದಾರೆ.
ಕ್ರಿಕೆಟ್ ಆಟಗಾರ ಯಜುವೇಂದ್ರ ಚಾಹಲ್, ಗಾಯಕಿ ಅನನ್ಯಾ ಬಿರ್ಲಾ, ಗಾಯಕ ಅರ್ಜಿತ್ ಸಿಂಗ್, ನಿರ್ಮಾಪಕ ಸಾಜಿದ್ ಕೂಡಾ ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದು, ಸ್ಪರ್ಧೆಯ ನಂತರ ಸ್ಪರ್ಧಿಗಳೊಂದಿಗೆ ಆನಂದ್ ಸಂವಾದವನ್ನೂ ನಡೆಸಲಿದ್ದಾರೆ. ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ಸಂಗ್ರಹಿಸಲು ಇದನ್ನು ಆಯೋಜಿಸಲಾಗುತ್ತಿದೆ. ಚೆಸ್ಕಾಮ್ ಇಂಡಿಯಾ ಯೂಟ್ಯೂಬ್ ಚಾನೆಲ್ನಲ್ಲಿ ಇದರ ನೇರಪ್ರಸಾರವಿರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.