ಚೆನ್ನೈ: ಬೆಂಗಳೂರು ಟಾರ್ಫಿಡೋಸ್ ತಂಡವು ಇಲ್ಲಿನ ಜವಾಹರಲಾಲ್ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರೈಮ್ ವಾಲಿಬಾಲ್ ಲೀಗ್ನಲ್ಲಿ ಗೆಲುವಿನ ಅಭಿಯಾನ ಮುಂದುವರಿಸಿದೆ.
ಗುರುವಾರ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವು 14-16, 19-17, 13- 15, 15-10, 15-11ರಿಂದ ಕ್ಯಾಲಿಕಟ್ ಹಿರೋಸ್ ವಿರುದ್ಧ ಗೆಲುವು ದಾಖಲಿಸಿದೆ.
ಪಂದ್ಯದಲ್ಲಿ ಚಾಕಚಕ್ಯತೆಯ ಮೆರೆದ ಬೆಂಗಳೂರು ತಂಡದ ಟಿ.ಆರ್. ಸೇತು ಪಂದ್ಯದ ಆಟಗಾರ ಪ್ರಶಸ್ತಿ ಪಡೆದರು. ಅವರು ತಮ್ಮ ಆಕ್ರಮಣಕಾರಿ ಸರ್ವ್ಗಳ ಮೂಲಕ ಸೇತು ಗಮನ ಸೆಳೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.