ಬೆಂಗಳೂರು: ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ‘ಉದ್ಯಾನನಗರಿ’ಯಲ್ಲಿ ನಡೆಯಲಿರುವ ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಟೂರ್ನಿಯಲ್ಲಿ ಆಡಲಿದ್ದಾರೆ.
ವಿದಾಯದ ಹಾದಿಯಲ್ಲಿರುವ ಪೇಸ್ ಅವರ ಆಟವನ್ನು ಬಹುತೇಕ ಕೊನೆಯ ಬಾರಿಗೆ ನೋಡುವ ಅವಕಾಶ ಇಲ್ಲಿಯ ಟೆನಿಸ್ಪ್ರಿಯರಿಗೆ ಸಿಗಲಿದೆ. ಪೇಸ್ ಅವರಿಗೂ ಇದು ಭಾರತದಲ್ಲಿ ಕೊನೆಯ ಟೂರ್ನಿಯಾಗುವ ಸಾಧ್ಯತೆ ಇದೆ. ಫೆಬ್ರುವರಿ ಹತ್ತರಿಂದ ಕರ್ನಾಟಕ ಲಾನ್ ಟೆನಿಸ್ ಸಂಸ್ಥೆಯ (ಕೆಎಸ್ಎಲ್ಟಿಎ)ಅಂಕಣದಲ್ಲಿ ಟೂರ್ನಿ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.