ಬೆಂಗಳೂರು: ಕರ್ನಾಟಕದ ಬಿ.ಆರ್.ನಿಕ್ಷೇಪ್ ಅವರು ಹರಿಯಾಣದ ಸೋನಿಪತ್ನಲ್ಲಿ ನಡೆಯುತ್ತಿರುವ ಎಐಟಿಎ ರಾಷ್ಟ್ರೀಯ ರ್ಯಾಂಕಿಂಗ್ ಟೆನಿಸ್ ಟೂರ್ನಿಯ ಕ್ವಾರ್ಟರ್ಫೈನಲ್ಗೆ ಲಗ್ಗೆಯಿಟ್ಟಿದ್ದಾರೆ.
ಸೋನಿಪತ್ನ ಲಿಟಲ್ ಎಂಜೆಲ್ ಸ್ಪೋಟ್ಸ್ ಕಾಂಪ್ಲೆಕ್ಸ್ನಲ್ಲಿ ನಡೆಯುತ್ತಿರುವ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ಬುಧವಾರ ಅವರು 6-1,6-2ರಿಂದ ಹರಿಯಾಣದ ಆದಿತ್ಯ ನಂದಾಲ್ ಅವರನ್ನು ಮಣಿಸಿದರು.
ಎಂಟರಘಟ್ಟದ ಪಂದ್ಯದಲ್ಲಿ ಅವರು ಹರಿಯಾಣದ ವೈಭವ್ ಕುಂದು ಅವರನ್ನು ಎದುರಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.