ADVERTISEMENT

ವಂಚನೆಯ ಆ್ಯಪ್‌ಗಳ ವಿರುದ್ಧ ಕ್ರಮ: ನಿರ್ಮಲಾ

ಪಿಟಿಐ
Published 23 ಏಪ್ರಿಲ್ 2023, 20:43 IST
Last Updated 23 ಏಪ್ರಿಲ್ 2023, 20:43 IST
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್   

ನವದೆಹಲಿ: ವಂಚನೆಯ ಉದ್ದೇಶದ ಹಣಕಾಸಿನ ಆ್ಯಪ್‌ಗಳಿಗೆ ಲಗಾಮು ಹಾಕಲು ಕೇಂದ್ರ ಹಣಕಾಸು ಸಚಿವಾಲಯವು, ಆರ್‌ಬಿಐ ಹಾಗೂ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜೊತೆ ಕೆಲಸ ಮಾಡುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ವಂಚನೆಯ ಉದ್ದೇಶದ ಆ್ಯಪ್‌ಗಳ ವಿಚಾರವಾಗಿ ಹೂಡಿಕೆದಾರರು ಎಚ್ಚರಿಕೆಯಿಂದ ಇರಬೇಕು, ಭಾರಿ ಲಾಭ ತಂದುಕೊಡುವ ಹೇಳಿಕೆಗಳನ್ನು ಕೇಳಿ ಮಾರುಹೋಗಬಾರದು ಎಂದು ಎಚ್ಚರಿಸಿದ್ದಾರೆ. ‘ನಾವು ಇಂತಹ
ಆ್ಯಪ್‌ಗಳ ವಿರುದ್ಧ ಹಿಂದೆಂದೂ ಕಾಣದ ಮಟ್ಟದಲ್ಲಿ, ಲಗಾಮು ಹಾಕುವ ಕೆಲಸ ಮಾಡುತ್ತಿದ್ದೇವೆ’ ಎಂದು ಅವರು ತುಮಕೂರಿನಲ್ಲಿ ಹೇಳಿದ್ದಾರೆ.

‘ಎಚ್ಚರಿಕೆ ಇರಬೇಕು. ಹಣದ ವಿಚಾರದಲ್ಲಿ ಎರಡು ಬಾರಿ ಪರಿಶೀಲನೆ ನಡೆಸಿಕೊಳ್ಳಬೇಕು, ಕುರಿಮಂದೆಯಂತೆ ಸಾಗಬಾರದು’ ಎಂದು ಕಿವಿಮಾತು ಹೇಳಿದ್ದಾರೆ. ಹಣಕಾಸಿನ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಭಾವ ಬೀರುವ ವ್ಯಕ್ತಿಗಳನ್ನು ನಿಯಂತ್ರಣಕ್ಕೆ ಒಳಪಡಿಸುವ ಪ್ರಸ್ತಾವ ತಮ್ಮ ಮುಂದೆ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.