ADVERTISEMENT

ಸೋನಿಯಾ ವಿರುದ್ಧ ಅವಹೇಳನ ಆರೋಪ: ಟ್ವಿಟರ್‌ನಲ್ಲಿ ಅರ್ನಬ್ ಪರ–ವಿರುದ್ಧ ಚರ್ಚೆ

ಏಜೆನ್ಸೀಸ್
Published 22 ಏಪ್ರಿಲ್ 2020, 17:01 IST
Last Updated 22 ಏಪ್ರಿಲ್ 2020, 17:01 IST
ಅರ್ನಬ್ ಗೋಸ್ವಾಮಿ
ಅರ್ನಬ್ ಗೋಸ್ವಾಮಿ   

ಮಹಾರಾಷ್ಟ್ರದ ಪಾಲ್ಗರ್‌ನಲ್ಲಿ ನಡೆದ ಸಾಧುಗಳ ಹತ್ಯೆ ವಿಷಯಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಗ್ಗೆ ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಅರ್ನಬ್ ಪರ–ವಿರುದ್ಧ ಚರ್ಚೆ ಟ್ವಿಟರ್‌ನಲ್ಲಿ ತಾರಕಕ್ಕೇರಿದೆ.

ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಸೋನಿಯಾ ಗಾಂಧಿ ಅಭಿಮಾನಿಗಳು ಅರ್ನಬ್ ಬಂಧನಕ್ಕೆ ಆಗ್ರಹಿಸಿದ್ದಾರೆ. ಸಾವಿರಾರು ಮಂದಿ ಅರ್ನಬ್ ಬಂಧನಕ್ಕೆ ಆಗ್ರಹಿಸಿ ಟ್ವೀಟ್ ಮಾಡಿದ್ದು, #ArrestAntiIndiaArnab #arrestarnabgoswami ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್ ಆಗಿವೆ. ಮತ್ತೊಂದೆಡೆ ಅರ್ನಬ್ ಅವರನ್ನು ಬೆಂಬಲಿಸಿ ಸಾವಿರಾರು ಮಂದಿ ಟ್ವೀಟ್ ಮಾಡಿದ್ದಾರೆ. #IsupportArnabGoswami #WeSupportArnab ಹ್ಯಾಷ್‌ಟ್ಯಾಗ್‌ಗಳೂ ಟ್ರೆಂಡ್ ಆಗಿವೆ.

‘ಸೋನಿಯಾ ವಿರುದ್ಧ ಅರ್ನಬ್ ಮಾಡಿರುವ ಅವಹೇಳನ ಖಂಡನೀಯ. ಅವರ ಹುಚ್ಚುತನ ಮಿತಿ ಮೀರಿದೆ. ಅವರ ಬಗ್ಗೆ ಅವರಿಗೇ ನಾಚಿಕೆಯಾಗಬೇಕು’ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಟ್ವೀಟ್ ಮಾಡಿದ್ದಾರೆ.

ADVERTISEMENT

ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸಾಧುಗಳ ಹತ್ಯೆ ವಿಷಯಕ್ಕೆ ಸಂಬಂಧಿಸಿ ಮಾತನಾಡಿದ್ದ ಅರ್ನಬ್, ಈ ವಿಷಯದ ಕುರಿತು ಸೋನಿಯಾ ಗಾಂಧಿ ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದ್ದರು. ಮೌಲ್ವಿಗಳನ್ನು ಹೀಗೆ ಕೊಂದಿದ್ದರೆ ದೇಶವೀಗ ಸುಮ್ಮನಿರುತ್ತಿತ್ತೇ. ಇಟಲಿಯ ಸೋನಿಯಾ ಗಾಂಧಿ ಈಗ ಯಾಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದ್ದರು ಎನ್ನಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.