ಲಖಿಂಪುರ ಖೇರಿ:ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲ ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಲಖಿಂಪುರ ಖೇರಿ ಜಿಲ್ಲೆಯಮಹಂಗು ಖೇರಾ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿ ಶಾಲೆಗೆ 10 ನಿಮಿಷ ತಡವಾಗಿ ಬಂದಿದ್ದಕ್ಕೆ ಪ್ರಾಂಶುಪಾಲ ಶಿಕ್ಷಕಿಗೆ ಬೂಟಿನಿಂದ ಹೊಡೆದಿದ್ದಾರೆ. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಶಿಕ್ಷಕಿ ಶಾಲೆಗೆ ತಡವಾಗಿ ಬಂದಿದ್ದರಿಂದ ಕುಪಿತಗೊಂಡ ಪ್ರಾಂಶುಪಾಲ ಶೂಗಳಿಂದ ಅವರನ್ನು ಥಳಿಸಿದ್ದಾರೆ. 20 ಸೆಕೆಂಡುಗಳ ಈ ವಿಡಿಯೊವನ್ನು ಎಎನ್ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೊವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.
ಈ ಘಟನೆ ಕುರಿತು ಪ್ರಾಂಶಪಾಲರ ಮೇಲೆ ಶಿಕ್ಷಕಿ ಸ್ಥಳೀಯ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಾಂಶುಪಾಲನನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.