ADVERTISEMENT

ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2021, 16:43 IST
Last Updated 11 ಫೆಬ್ರುವರಿ 2021, 16:43 IST
ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ ಪ್ರಸಾದ್
ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ ಪ್ರಸಾದ್   

ನವದೆಹಲಿ: ಖಾತೆಗಳನ್ನು ಬ್ಲಾಕ್ ಮಾಡುವುದರ ಕುರಿತು ಟ್ವಿಟರ್‌ ಮತ್ತು ಸರ್ಕಾರದ ನಡುವೆ ಜಟಾಪಟಿ ಮುಂದುವರಿದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ ಪ್ರಸಾದ್ ಅವರು, ‘ಸಾಮಾಜಿಕ ಜಾಲತಾಣಗಳು ಈ ನೆಲದ ಕಾನೂನಿಗೆ ಬದ್ಧವಾಗಿರುವುದು ಕಡ್ಡಾಯ. ಇಲ್ಲದಿದ್ದರೆ ಕಟ್ಟುನಿಟ್ಟಿನ ಕ್ರಮಜರುಗಿಸಲಾಗು ವುದು’ ಎಂದು ಎಚ್ಚರಿಸಿದ್ದಾರೆ.

ನಾವು ಸಾಮಾಜಿಕ ಜಾಲತಾಣವನ್ನು ಗೌರವಿಸುತ್ತೇವೆ. ಇದು, ಜನರನ್ನು ಸಬಲೀಕರಣಗೊಳಿಸಿದೆ. ಆದರೆ, ಸಾಮಾಜಿಕ ಜಾಲತಾಣವನ್ನು ಸುಳ್ಳು ಸುದ್ದಿಗಳ ಪ್ರಚಾರ, ಹಿಂಸೆ ಹೆಚ್ಚಲು ಬಳಸಲಾಗುತ್ತಿದೆ. ಇಂಥ ಸಂದರ್ಭಗಳಲ್ಲಿ ಅವುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದರು.

ಟ್ವಿಟರ್ ವಿರುದ್ಧ ಹರಿಹಾಯ್ದ ಅವರು, ಆಡಳಿತ ಮಂಡಳಿಯು ಹಿಂಸೆಯನ್ನು ಖಂಡಿಸುವ ವಿಷಯದಲ್ಲಿ ದ್ವಿಮುಖ ನೀತಿಯನ್ನು ಹೊಂದಿದೆ ಎಂದು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.