ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಔತಣಕೂಟದಲ್ಲಿ ತಮ್ಮನ್ನು ನಡೆಸಿಕೊಂಡ ರೀತಿಗೆ ಖ್ಯಾತ ಹಿನ್ನಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣಂ ಬೇಸರ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಫೇಸ್ಬುಕ್ನಲ್ಲಿ ಅವರು ಬರೆದಿರುವ ಪೋಸ್ಟ್ ಈಗ ವೈರಲ್ ಆಗಿದೆ.
‘ಗೌರವಾನ್ವಿತ ಪ್ರಧಾನಿಯವರು ಅಕ್ಟೋಬರ್ 29ರಂದು ಅವರ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸುವಂತಾದದ್ದಕ್ಕೆ ರಾಮೋಜಿ ರಾವ್ ಅವರಿಗೆ ನಾನು ಆಭಾರಿಯಾಗಿದ್ದೇನೆ. ಅವರಿಂದಾಗಿ ನನಗೆ ಈ ಅವಕಾಶ ಲಭ್ಯವಾಯಿತು. ಪ್ರಧಾನಿ ನಿವಾಸದ ಒಳ ಪ್ರವೇಶಿಸುತ್ತಿದ್ದಂತೆ ಮೊಬೈಲ್ ಫೋನ್ ಅನ್ನು ಭದ್ರತಾ ಸಿಬ್ಬಂದಿ ಬಳಿ ನೀಡಿ ಒಳ ಹೋಗುವಂತೆ ನಮಗೆ ಸೂಚಿಸಲಾಯಿತು. ಅದಕ್ಕಾಗಿ ನಮಗೆ ಟೋಕನ್ಗಳನ್ನೂ ನೀಡಲಾಯಿತು. ಆದರೆ, ಆ ದಿನ ಸ್ಟಾರ್ಗಳು (ತಾರೆಯರು) ಪ್ರಧಾನಿ ಜತೆ ತಮ್ಮ ಮೊಬೈಲ್ಫೋನ್ಗಳಲ್ಲಿ ಸೆಲ್ಫಿ ತೆಗೆಯುತ್ತಿದ್ದುದನ್ನು ನೋಡಿ ನಾನು ದಿಗ್ಭ್ರಾಂತನಾದೆ’ ಎಂದುಬಾಲಸುಬ್ರಹ್ಮಣಂ ಫೇಸ್ಬುಕ್ ಪೋಸ್ಟ್ನಲ್ಲಿ ಬರೆದಿದ್ದಾರೆ.
ಈ ಪೋಸ್ಟ್ ಅನ್ನು ಈವರೆಗೆ 560ಕ್ಕೂ ಹೆಚ್ಚು ಜನ ಶೇರ್ ಮಾಡಿದ್ದು,5 ಸಾವಿರಕ್ಕೂ ಹೆಚ್ಚು ಮಂದಿ ಪ್ರತಿಕ್ರಿಯಿಸಿದ್ದಾರೆ.
ಇನ್ನಷ್ಟು...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.