ಚೆನ್ನೈ: ನಿವಾರ್ ಚಂಡಮಾರುತದ ಬಗೆಗಿನ ಮಾಹಿತಿಯನ್ನು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಹವಾಮಾನ ಇಲಾಖೆ ವಿರುದ್ಧ ದಕ್ಷಿಣ ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಮಂಗಳವಾರ ಚಂಡಮಾರುತದ ಸ್ವರೂಪ ಪಡೆದಿದೆ. 130-140 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು ಬುಧವಾರದ ಸಂಜೆ ಅಥವಾ ಗುರುವಾರ ಬೆಳಗ್ಗೆ ನಿವಾರ್ ಚಂಡಮಾರುತ ಚೆನ್ನೈ ಮತ್ತು ಪುದುಚೇರಿಯನ್ನು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಈ ಮಾಹಿತಿಯನ್ನು ನೀಡಿರುವ ಹವಾಮಾನ ಇಲಾಖೆಯು ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿದೆ. ಇದು ಹಿಂದಿ ಭಾಷಿಗರಲ್ಲದ ದಕ್ಷಿಣ ಭಾರತೀಯರನ್ನು ಕೆರಳಿಸಿದೆ.
#StopHindiImposition ಎಂಬ ಹ್ಯಾಶ್ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ನೆಟ್ಟಿಗರು 'ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ. ಈ ರೀತಿಯಾಗಿ ಹಿಂದಿಯನ್ನು ನಮ್ಮ ಮೇಲೆ ಹೇರಬೇಡಿ. ನೀವು ತಮಿಳು ಅಥವಾ ಇಂಗ್ಲಿಷ್ನಲ್ಲಿ ಟ್ವೀಟ್ ಮಾಡಿ' ಎಂದು ಹೇಳಿದ್ದಾರೆ.
#StopHindiImposation ಹ್ಯಾಶ್ಟ್ಯಾಗ್ ಹೊಂದಿರುವ ಕೆಲ ಟ್ವೀಟ್ಗಳು ಇಲ್ಲಿವೆ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.