ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಗಣಕ ಪರಿಷತ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ನುಡಿ 6.0 ತಂತ್ರಾಂಶವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗೃಹಕಚೇರಿ ‘ಕೃಷ್ಣಾ’ದಲ್ಲಿ ಗುರುವಾರ ಬಿಡುಗಡೆ ಮಾಡಿದರು.
ಉಚಿತವಾದ ಈ ತಂತ್ರಾಂಶದ ಬಳಕೆಯಿಂದ ಸರ್ಕಾರದ ಆಡಳಿತ ಇನ್ನಷ್ಟು ಸುಗಮವಾಗಲಿದ್ದು, ಜಗತ್ತಿನಾದ್ಯಂತ ಕನ್ನಡಿಗರ ಪರಸ್ಪರ ಇ–ಸಂಪರ್ಕಕ್ಕೆ ಪೂರಕವಾಗ
ಲಿದೆ. ಸರ್ಕಾರದ ಎಲ್ಲ ಅಂತರ್ಜಾಲ ತಾಣಗಳಲ್ಲಿ ಈ ತಂತ್ರಾಂಶ ಬಳಕೆಗೆ ಲಭ್ಯವಾಗಲಿದೆ ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯ, ‘ಹಿಂದಿನನುಡಿ ತಂತ್ರಾಂಶಗಳಲ್ಲಿ ಇದ್ದ ಲೋಪಗಳನ್ನು ಸರಿಪಡಿಸಲಾಗಿದೆ’ ಎಂದರು.
ಜಿ.ಪರಮೇಶ್ವರ, ಪಿ.ಟಿ.ಪರಮೇಶ್ವರ ನಾಯ್ಕ, ಹಂಪ ನಾಗರಾಜಯ್ಯ, ಕಮಲಾ ಹಂಪನಾ, ‘ಮುಖ್ಯಮಂತ್ರಿ’ ಚಂದ್ರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.