ADVERTISEMENT

ಟ್ವಿಟರ್ ಇಂಡಿಯಾ ಎಂಡಿಗೆ ಯುಪಿ ಪೊಲೀಸರು ನೀಡಿದ್ದ ನೋಟಿಸ್ ರದ್ದುಪಡಿಸಿದ ಹೈಕೋರ್ಟ್

ಡೆಕ್ಕನ್ ಹೆರಾಲ್ಡ್
Published 23 ಜುಲೈ 2021, 10:53 IST
Last Updated 23 ಜುಲೈ 2021, 10:53 IST
ರಾಯಿಟರ್ಸ್ ಚಿತ್ರ
ರಾಯಿಟರ್ಸ್ ಚಿತ್ರ   

ಬೆಂಗಳೂರು: ಕೋಮು ಸೂಕ್ಷ್ಮ ವಿಡಿಯೊ ಟ್ವೀಟ್‌ ವಿಚಾರವಾಗಿ ‘ಟ್ವಿಟರ್‌ ಇಂಡಿಯಾ’ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಉತ್ತರ ಪ್ರದೇಶ ಪೊಲೀಸರು ನೀಡಿದ್ದ ನೋಟಿಸ್‌ ಅನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಪಡಿಸಿದೆ.

ಗಾಜಿಯಾಬಾದ್‌ನಲ್ಲಿ ನಡೆದ ಹಲ್ಲೆಯದ್ದು ಎನ್ನಲಾದ ಕೋಮು ಸೂಕ್ಷ್ಮ ವಿಡಿಯೊವೊಂದನ್ನು ಟ್ವಿಟರ್ ಪ್ಲಾಟ್‌ಫಾರ್ಮ್‌ನಲ್ಲಿ ಬಳಕೆದಾರರೊಬ್ಬರು ಅಪ್‌ಲೋಡ್ ಮಾಡಿದ್ದರು. ಈ ವಿಚಾರವಾಗಿ ಮಹೇಶ್ವರಿ ಅವರಿಗೆ ನೋಟಿಸ್ ನೀಡಲಾಗಿತ್ತು.

ನ್ಯಾಯ ವ್ಯಾಪ್ತಿ ಮೀರಿ ಮತ್ತು ಕಾನೂನಿನ ಪರಿಮಿತಿಯಲ್ಲಿ ಒಳಗೊಳ್ಳದೆ ಅಪರಾಧ ದಂಡಸಂಹಿತೆಯ ಸೆಕ್ಷನ್ 41ರ ಅಡಿ ನೋಟಿಸ್ ನೀಡಲಾಗಿತ್ತು. ಜೂನ್ 17ರಂದು ಅಪರಾಧ ದಂಡಸಂಹಿತೆಯ ಸೆಕ್ಷನ್ 160ರ ಅಡಿ ಮೊದಲ ನೋಟಿಸ್ ನೀಡಲಾಗಿತ್ತು ಎಂದು ಮಹೇಶ್ವರಿ ಪರ ವಕೀಲರಾದ ಸಿ.ವಿ. ನಾಗೇಶ್ ವಾದಿಸಿದ್ದರು.

ನ್ಯಾಯಮೂರ್ತಿ ಜಿ. ನರೇಂದ್ರ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.