ADVERTISEMENT

ಮೃತ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ; ಮನ ಮಿಡಿಯುವ ವಿಡಿಯೊ ವೈರಲ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜೂನ್ 2021, 7:20 IST
Last Updated 5 ಜೂನ್ 2021, 7:20 IST
ಟ್ವಿಟರ್ ಸ್ಕ್ರೀನ್‌ಶಾಟ್
ಟ್ವಿಟರ್ ಸ್ಕ್ರೀನ್‌ಶಾಟ್   

ಕೊಟ್ಟಾಯಂ: ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಮಾವುತನೊಬ್ಬನ ಅಂತ್ಯಕ್ರಿಯೆಯ ಸ್ಥಳಕ್ಕೆ ಧಾವಿಸಿದ ಗಜರಾಜ, ಕಣ್ಣೀರ ವಿದಾಯ ನೀಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.

ಕಳೆದ 25 ವರ್ಷಗಳಿಂದ ಈ ಆನೆಯ ಪರಿಪಾಲನೆಯನ್ನು ಮಾವುತ ದಾಮೋದರ್ ನಾಯರ್ ನೋಡಿಕೊಳ್ಳುತ್ತಿದ್ದರು. 74 ವರ್ಷದ ದಾಮೋದರ್ ಇಹಲೋಕ ತ್ಯಜಿಸಿದಾಗ ಮೂಕ ಪ್ರಾಣಿಯುಮಾವುತನಿಗೆ ಭಾವನಾತ್ಮಕ ಅಶ್ರುತರ್ಪಣಗೈದ ವಿಡಿಯೊ ಎಂಥಹ ಕಲ್ಲು ಹೃದಯವನ್ನು ಕರಗಿಸಿಬಿಡುತ್ತದೆ.

ಬ್ರಹದತ್ತನ್ ಎಂಬ ಆನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾವುತನ ಮೇಲೆ ಆನೆ ತೋರಿಸಿರುವ ಪ್ರೀತಿಗೆ ಸ್ಥಳೀಯ ನಿವಾಸಿಗಳು ಸೇರಿದಂತೆ ಎಲ್ಲರೂ ಮನಸೋತಿದ್ದಾರೆ.

ADVERTISEMENT

ಮನೆಯಲ್ಲಿ ಪಾರ್ಥಿವ ಶರೀರವನ್ನು ನೋಡಲು ಬಂದ ಆನೆ ಕಣ್ಣೀರಿಟ್ಟಿತ್ತಲ್ಲದೆ ಸೊಂಡಿಲಿನಿಂದ ಮೃತದೇಹವನ್ನು ಸ್ಪರ್ಶಿಸಿ ಮೇಲಕ್ಕೆ ಎತ್ತಿಹಿಡಿದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.