ADVERTISEMENT

ಜಸ್ಟ್‌ ಮ್ಯೂಸಿಕ್‌–02: ಪೊಲೀಸ್‌ ಕೆಲಸಕ್ಕೆ ಪ್ರಖ್ಯಾತ ಗಾಯಕ!

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 0:58 IST
Last Updated 2 ಜನವರಿ 2021, 0:58 IST

ಪಂಡಿತ್‌ ವೆಂಕಟೇಶ್‌ ಕುಮಾರ್‌ ಅವರು ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪ್ರತಿಭೆ. ಅವರು ಪುಣ್ಯಾಶ್ರಮದಲ್ಲಿ ಸಂಗೀತ ಕಲಿತು ಹೊರಬಂದಾಗ ಅವರ ಮುಂದೆ ಪ್ರಶ್ನಾರ್ಥಕ ಚಿನ್ಹೆ ಇತ್ತು. ಮುಂದೇನೂ ಮಾಡಬೇಕು, ಭವಿಷ್ಯ ಹೇಗೆ ಎಂಬ ಪ್ರಶ್ನೆ ಕಾಡುತ್ತದೆ. ಬೇರೆಬೇರೆ ಕೆಲಸ ಹುಡುಕುತ್ತಾರೆ, ಅರ್ಜಿ ಹಾಕುತ್ತಾರೆ. ಮುಖ್ಯವಾಗಿ ಪೊಲೀಸ್‌ ಇಲಾಖೆಯಲ್ಲಿ ಕಾನ್‌ಸ್ಟೆಬಲ್‌ ಕೆಲಸಕ್ಕೆ ಅರ್ಜಿ ಹಾಕುತ್ತಾರೆ. ಸಂದರ್ಶನ ಬರುತ್ತೆ. ಪೊಲೀಸ್‌ ಕೆಲಸಕ್ಕೆ ಹೋಗೋದು ಎಂದು ನಿರ್ಧಾರ ಮಾಡುತ್ತಾರೆ. ಅದರ ನಡುವೆ ವಿಜಯ ಮಹಾಂತೇಶ ಕಾಲೇಜಿನ ಸ್ಥಾಪಕ ಟಿ.ಪಿ. ಅಕ್ತಿ ಅವರಿಗೆ ಈ ವಿಚಾರ ತಿಳಿಸುತ್ತಾರೆ. ಅವರು ಅಸಮಾಧಾನ ವ್ಯಕ್ತಪಡಿಸಿ ಕಾನ್‌ಸ್ಟೆಬಲ್‌ ಕೆಲಸಕ್ಕೆ ಹೋಗದಂತೆ ತಡೆಯುತ್ತಾರೆ. ಅದು ಅವರ ಬದುಕಿನ ಟರ್ನಿಂಗ್‌ ಪಾಯಿಂಟ್‌ ಆಗುತ್ತದೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಮತ್ತಷ್ಟು ವಿಡಿಯೊಗಳಿಗಾಗಿ: ಯೂಟ್ಯೂಬ್‌ ನೋಡಿ

ADVERTISEMENT

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ ವೆಬ್‌ಸೈಟ್‌ ನೋಡಿ

ಫೇಸ್‌ಬುಕ್‌: ಲೈಕ್ ಮಾಡಿ

ಟ್ವಿಟರ್‌: ಫಾಲೋ ಮಾಡಿ

ತಾಜಾ ಸುದ್ದಿಗಳಿಗಾಗಿ: ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.