ADVERTISEMENT

ಅರ್ಮೇನಿಯಾ, ಉಜ್ಬೇಕಿಸ್ತಾನದ ವಿದೇಶಾಂಗ ಸಚಿವರನ್ನು ಭೇಟಿಯಾದ ಸಚಿವ ಜೈಶಂಕರ್‌

ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ವಿದೇಶಾಂಗ ಸಚಿವರು ಭಾಗಿ

ಪಿಟಿಐ
Published 17 ಸೆಪ್ಟೆಂಬರ್ 2021, 6:37 IST
Last Updated 17 ಸೆಪ್ಟೆಂಬರ್ 2021, 6:37 IST
ತಜಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ಶುಕ್ರವಾರ ನಡೆದ ಎಸ್‌ಸಿಒ ಶೃಂಗಸಭೆಯಲ್ಲಿ ವಿವಿಧ ರಾಷ್ಟ್ರಗಳ ನಾಯಕರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್‌
ತಜಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ಶುಕ್ರವಾರ ನಡೆದ ಎಸ್‌ಸಿಒ ಶೃಂಗಸಭೆಯಲ್ಲಿ ವಿವಿಧ ರಾಷ್ಟ್ರಗಳ ನಾಯಕರೊಂದಿಗೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್‌   

ದುಶಾಂಬೆ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಶುಕ್ರವಾರ ಇಲ್ಲಿ ಇರಾನ್, ಅರ್ಮೇನಿಯಾ ಮತ್ತು ಉಜ್ಬೇಕಿಸ್ತಾನ ದೇಶಗಳ ಸಹವರ್ತಿ ನಾಯಕರನ್ನು ಭೇಟಿಯಾಗಿ, ಅಫ್ಗಾನಿಸ್ತಾನದ ಇತ್ತೀಚೆಗಿನ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು.

ಇಲ್ಲಿ ಆರಂಭವಾಗಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ (ಎಸ್‌ಸಿಒ) ಪಾಲ್ಗೊಳ್ಳಲು ಬಂದಿರುವ ಜೈಶಂಕರ್ ಅವರು, ತಮ್ಮ ಸಹವರ್ತಿ ನಾಯಕರೊಂದಿಗೆ ಪ್ರಾದೇಶಿಕ ಸವಾಲುಗಳ ಎದುರಿಸುವ ಹಾಗೂ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸುವ ಮಾರ್ಗಗಳ ಕುರಿತು ಚರ್ಚಿಸಿದರು.

‘ಎಸ್‌ಒಸಿ ಶೃಂಗಸಭೆಯಲ್ಲಿ ಇರಾನ್‌ನ ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್‌ ಅವರನ್ನು ಭೇಟಿಯಾಗಿದ್ದು ಸಂತಸ ತರಿಸಿದೆ‘ ಎಂದು ಜೈಶಂಕರ್ ಟ್ವೀಟ್‌ ಮಾಡಿದ್ದಾರೆ.

‘ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಮತ್ತು ಪ್ರಾದೇಶಿಕ ಸವಾಲುಗಳ ಎದುರಿಸುವುದಕ್ಕಾಗಿ ಒಟ್ಟಾಗಿ ಕೆಲಸ ಮಾಡುವ ಕುರಿತು ಈ ವೇಳೆ ಮಾತುಕತೆ ನಡೆಸಲಾಯಿತು’ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.