Top 10 News | ಈ ದಿನದ ಪ್ರಮುಖ 10 ಸುದ್ದಿಗಳು, 26 ಜೂನ್‌ 2023

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಸಹ ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್ ವಜಾ ಪ್ರಧಾನಿಯ ಮೊದಲ ಆದ್ಯತೆ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಡಿಎಂಕೆ ಸಂಸದೆ ಕನಿಮೊಳಿ ವಿಚಾರವಾಗಿ ಚಾಲಕ ವೃತ್ತಿಗೆ ರಾಜೀನಾಮೆ ನೀಡಿದ್ದ ಮಹಿಳೆಗೆ ತಮಿಳು ನಟ ಕಮಲ್‌ ಹಾಸನ್‌ ಕಾರು ಉಡುಗೊರೆ ನೀಡಿದ್ದಾರೆ.

ವಿಮಾನ ನಿಲ್ದಾಣದ ಸಾಮಾನ್ಯ ಚಟುವಟಿಕೆಗಳ ಕ್ಷಣ ಕ್ಷಣದ ಮಾಹಿತಿಯನ್ನು ಪ್ರಯಾಣಿಕರಿಗೆ ನೀಡಲು ಕೆಐಎಎಲ್‌ ‘ಬಿಎಲ್‌ಆರ್‌ ಪ್ಲಸ್‌‘ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದೆ.

ಆಸ್ಟ್ರೇಲಿಯಾ ಪಾರ್ಲಿಮೆಂಟ್‌ ಹತ್ತಿರ ಹೊಸದಾಗಿ ರಾಯಭಾರ ಕಚೇರಿ ತೆರೆಯುವ ರಷ್ಯಾದ ಪ್ರಯತ್ನಕ್ಕೆ ಸೋಮವಾರ ಕಾನೂನಾತ್ಮಕ ಹಿನ್ನಡೆಯಾಗಿದೆ.

ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ ಎಂದು ರಾಜ್ಯ ಕಾಂಗ್ರೆಸ್‌ ಲೇವಡಿ ಮಾಡಿದೆ.

ಭಾರತದಲ್ಲಿ ₹10 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುವುದಾಗಿ ಲುಲು ಸಮೂಹದ ಅಧ್ಯಕ್ಷ ಯೂಸುಫ್‌ ಅಲಿ ಹೇಳಿದ್ದಾರೆ.

ಲಿಯೋ ಚಿತ್ರದ ‘ನಾ ರೆಡಿ’ ಹಾಡಿನಲ್ಲಿ ಡ್ರಗ್ಸ್‌ ಸೇವನೆ ಮತ್ತು ರೌಡಿಸಂ ಅನ್ನು ವೈಭವೀಕರಿಸಲಾಗಿದೆ ಎಂಬ ಆರೋಪದಡಿ ನಟ ದಳಪತಿ ವಿಜಯ್‌ ವಿರುದ್ಧ ದೂರು ದಾಖಲಾಗಿದೆ.

ವಿಜಯಪುರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಿಗರು ಅಡ್ಡಿ ಪಡಿಸಿ, ಗದ್ದಲ ಎಬ್ಬಿಸಿದ್ದಾರೆ.

ಎಲಾನ್‌ ಮಸ್ಕ್‌ನ ಸ್ಟಾರ್‌ಲಿಂಕ್ ಭಾರತ ಪ್ರವೇಶ: ಸ್ಪೆಕ್ಟ್ರಮ್‌ಗಾಗಿ ಮುಸುಕಿನ ಗುದ್ದಾಟ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.