<p>ಭಾಲ್ಕಿ: ‘ಬಸವತತ್ವ ಪ್ರಚಾರ ಮತ್ತು ಪ್ರಸಾರಕ್ಕೆ ನಾಡೋಜ ಬಸವಲಿಂಗ ಪಟ್ಟದ್ದೇವರು ತಮ್ಮ ಬದುಕು ಮೀಸಲಿಟ್ಟಿದ್ದಾರೆ’ ಎಂದು ಕೊಪ್ಪಳದ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ಚನ್ನಬಸವಾಶ್ರಮದಲ್ಲಿ ನಡೆದ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರೋಪ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘75 ವಸಂತಗಳನ್ನು ಸಾರ್ಥಕವಾಗಿ ಸಾಗಿಸಿರುವ ಪೂಜ್ಯರ ಸಾಧನೆ ಕೂಡ ಅಷ್ಟೇ ಮೈಲುಗಲ್ಲಾಗಿ ನಿಂತಿವೆ. ಅವರ ದಾಸೋಹ, ಸಮಾಜ ಸೇವೆ ಮಾದರಿಯಾಗಿವೆ. ಅವರು ಶತಾಯಷಿಗಳಾಗಿ ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡುತ್ತಿರಲಿ’ ಎಂದು ಹಾರೈಸಿದರು.</p>.<p>ಮುಗುಳಖೋಡ ಜಿಡಗಾ ಶ್ರೀಮಠದ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಗಡಿಭಾಗದಲ್ಲಿ ಚನ್ನಬಸವ ಪಟ್ಟದ್ದೇವರು ನೆಲೆಸದಿದ್ದರೇ ಈ ಗಡಿಭಾಗ ಶೈಕ್ಷಣಿಕವಾಗಿ ವಂಚಿತವಾಗುತ್ತಿತ್ತು. ಚನ್ನಬಸವ ಪಟ್ಟದ್ದೇವರು ಮಾಡಿರುವ ಸೇವೆಯನ್ನು ಬಸವಲಿಂಗ ಪಟ್ಟದ್ದೇವರು ಬದುಕಿನುದ್ದಕ್ಕೂ ಅನುಸರಿಸಿ ಈ ಭಾಗವನ್ನು ಅಭಿವೃದ್ಧಿ ಪಡಿಸುವ ಕಾರ್ಯ ಮಾಡಿದ್ದಾರೆ’ ಎಂದರು.</p>.<p>ಹಾರಕೂಡ ಮಠದ ಚೆನ್ನವೀರ ಶಿವಾಚಾರ್ಯರು, ಹುಲಸೂರು ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿದರು.</p>.<p>ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ನಿರ್ಗುಡಿ ಹವಾ ಮಲ್ಲಿನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-33-1869555750</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ಬಸವತತ್ವ ಪ್ರಚಾರ ಮತ್ತು ಪ್ರಸಾರಕ್ಕೆ ನಾಡೋಜ ಬಸವಲಿಂಗ ಪಟ್ಟದ್ದೇವರು ತಮ್ಮ ಬದುಕು ಮೀಸಲಿಟ್ಟಿದ್ದಾರೆ’ ಎಂದು ಕೊಪ್ಪಳದ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ಚನ್ನಬಸವಾಶ್ರಮದಲ್ಲಿ ನಡೆದ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರೋಪ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘75 ವಸಂತಗಳನ್ನು ಸಾರ್ಥಕವಾಗಿ ಸಾಗಿಸಿರುವ ಪೂಜ್ಯರ ಸಾಧನೆ ಕೂಡ ಅಷ್ಟೇ ಮೈಲುಗಲ್ಲಾಗಿ ನಿಂತಿವೆ. ಅವರ ದಾಸೋಹ, ಸಮಾಜ ಸೇವೆ ಮಾದರಿಯಾಗಿವೆ. ಅವರು ಶತಾಯಷಿಗಳಾಗಿ ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡುತ್ತಿರಲಿ’ ಎಂದು ಹಾರೈಸಿದರು.</p>.<p>ಮುಗುಳಖೋಡ ಜಿಡಗಾ ಶ್ರೀಮಠದ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಗಡಿಭಾಗದಲ್ಲಿ ಚನ್ನಬಸವ ಪಟ್ಟದ್ದೇವರು ನೆಲೆಸದಿದ್ದರೇ ಈ ಗಡಿಭಾಗ ಶೈಕ್ಷಣಿಕವಾಗಿ ವಂಚಿತವಾಗುತ್ತಿತ್ತು. ಚನ್ನಬಸವ ಪಟ್ಟದ್ದೇವರು ಮಾಡಿರುವ ಸೇವೆಯನ್ನು ಬಸವಲಿಂಗ ಪಟ್ಟದ್ದೇವರು ಬದುಕಿನುದ್ದಕ್ಕೂ ಅನುಸರಿಸಿ ಈ ಭಾಗವನ್ನು ಅಭಿವೃದ್ಧಿ ಪಡಿಸುವ ಕಾರ್ಯ ಮಾಡಿದ್ದಾರೆ’ ಎಂದರು.</p>.<p>ಹಾರಕೂಡ ಮಠದ ಚೆನ್ನವೀರ ಶಿವಾಚಾರ್ಯರು, ಹುಲಸೂರು ಗುರುಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿದರು.</p>.<p>ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ನಿರ್ಗುಡಿ ಹವಾ ಮಲ್ಲಿನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-33-1869555750</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>