<p>ಬೆಂಗಳೂರು: ತೆಲುಗು ವಿಜ್ಞಾನ ಸಮಿತಿಯು ಇದೇ 16ರಂದು ಸಂಜೆ 5ಕ್ಕೆ ವೈಯಾಲಿ ಕಾವಲ್ನ ಶ್ರೀಕೃಷ್ಣದೇವ ರಾಯ ಕಲಾಮಂದಿರದಲ್ಲಿ ‘ಮಂಡಳಿ ವೆಂಕಟಕೃಷ್ಣ ರಾವ್’ ಅವರ ಜನ್ಮ ಶತಮಾನೋತ್ಸವ ಸಮಾರಂಭ ಹಮ್ಮಿಕೊಂಡಿದೆ.</p>.<p>ಈ ಸಮಾರಂಭದಲ್ಲಿ ‘ಮಾ ತೆಲುಗು ತಲ್ಲಿ’ ಕಿರುಚಿತ್ರ ಪ್ರದರ್ಶನ, ಬಾಬುಜಿ ಮತ್ತು ತಂಡವು ಬುರ್ರಕಥಾ ನೃತ್ಯ ಪ್ರಸ್ತುತ ಪಡಿಸಲಿದೆ. ಇದೇ ಸಂದರ್ಭದಲ್ಲಿ ಶಿಕ್ಷಣ ಮತ್ತು ತೆಲುಗು ಭಾಷೆಯ ಬೆಳವಣಿಗೆಗೆ ನೀಡಿದ ಕೊಡುಗೆಗಾಗಿ ವೆಂಕಟ ರಾಯುಡು, ವೈ.ಎಸ್.ವೈಕೆ. ವಾಸುದೇವರಾವ್, ಎ.ವಿ.ಸೀತಾರಾಮಯ್ಯ ಅವರನ್ನು ಸನ್ಮಾನಿಸಲಾಗುತ್ತದೆ.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ರಾಜು, ಮಂಡಳಿ ಬುದ್ಧಪ್ರಸಾದ್, ಸಂಸದ ಕೆ. ಗೋಪಿನಾಥ್, ಕೆ.ಆರ್. ರಮೇಶ್ ಕುಮಾರ್, ಪೊಟ್ಟಿ ಶ್ರೀರಾಮುಲು ತೆಲುಗು ವಿಶ್ವವಿದ್ಯಾಲಯ ಕುಲಪತಿ ಡಿ. ಮುನಿರತ್ನಂ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-4-924969937</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ತೆಲುಗು ವಿಜ್ಞಾನ ಸಮಿತಿಯು ಇದೇ 16ರಂದು ಸಂಜೆ 5ಕ್ಕೆ ವೈಯಾಲಿ ಕಾವಲ್ನ ಶ್ರೀಕೃಷ್ಣದೇವ ರಾಯ ಕಲಾಮಂದಿರದಲ್ಲಿ ‘ಮಂಡಳಿ ವೆಂಕಟಕೃಷ್ಣ ರಾವ್’ ಅವರ ಜನ್ಮ ಶತಮಾನೋತ್ಸವ ಸಮಾರಂಭ ಹಮ್ಮಿಕೊಂಡಿದೆ.</p>.<p>ಈ ಸಮಾರಂಭದಲ್ಲಿ ‘ಮಾ ತೆಲುಗು ತಲ್ಲಿ’ ಕಿರುಚಿತ್ರ ಪ್ರದರ್ಶನ, ಬಾಬುಜಿ ಮತ್ತು ತಂಡವು ಬುರ್ರಕಥಾ ನೃತ್ಯ ಪ್ರಸ್ತುತ ಪಡಿಸಲಿದೆ. ಇದೇ ಸಂದರ್ಭದಲ್ಲಿ ಶಿಕ್ಷಣ ಮತ್ತು ತೆಲುಗು ಭಾಷೆಯ ಬೆಳವಣಿಗೆಗೆ ನೀಡಿದ ಕೊಡುಗೆಗಾಗಿ ವೆಂಕಟ ರಾಯುಡು, ವೈ.ಎಸ್.ವೈಕೆ. ವಾಸುದೇವರಾವ್, ಎ.ವಿ.ಸೀತಾರಾಮಯ್ಯ ಅವರನ್ನು ಸನ್ಮಾನಿಸಲಾಗುತ್ತದೆ.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ರಾಜು, ಮಂಡಳಿ ಬುದ್ಧಪ್ರಸಾದ್, ಸಂಸದ ಕೆ. ಗೋಪಿನಾಥ್, ಕೆ.ಆರ್. ರಮೇಶ್ ಕುಮಾರ್, ಪೊಟ್ಟಿ ಶ್ರೀರಾಮುಲು ತೆಲುಗು ವಿಶ್ವವಿದ್ಯಾಲಯ ಕುಲಪತಿ ಡಿ. ಮುನಿರತ್ನಂ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-4-924969937</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>