<p>ದಾವಣಗೆರೆ: ಕಲಾ ವಲಯದಲ್ಲಿ ಉತ್ಸಾಹಿಗಳ ಕೊರತೆ ಎದ್ದು ಕಾಣುತ್ತಿದೆ. ಸಂಘಟಿತ ಗುಂಪುಗಳು ಕಲಾಪಥವನ್ನು ಸುಭದ್ರವಾಗಿ ಮುನ್ನಡೆಸುವ ಅಗತ್ಯವಿದೆ ಎಂದು ‘ಆರ್ಟ್ ಪಾರ್ಕ್’ ಸಂಸ್ಥಾಪಕ ಕಲಾವಿದ ಎಸ್.ಜಿ. ವಾಸುದೇವ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ದೃಶ್ಯಕಲಾ ಕಾಲೇಜಿನಲ್ಲಿ ಆಯೋಜಿಸಿದ್ದ ‘ಆರ್ಟ್ ಪಾರ್ಕ್’ ಕಾರ್ಯ ಕ್ರಮದ 2ನೇ ದಿನವಾದ ಸೋಮವಾರ ನಡೆದ ಕಲಾ ಪ್ರಾತ್ಯಕ್ಷಿಕೆ ಮತ್ತು ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಮದ್ರಾಸ್ ಸ್ಕೂಲ್ ಆಫ್ ಆರ್ಟ್ನಲ್ಲಿ ಶಿಕ್ಷಣ ಪೂರೈಸಿದ ಬಳಿಕ ಕಲಾ ಬದುಕನ್ನು ಸ್ವತಂತ್ರವಾಗಿ ಕಟ್ಟಿಕೊಂಡೆವು. ಕೆ.ಸಿ.ಎಸ್. ಪಣಿಕ್ಕರ್ ನೇತೃತ್ವದಲ್ಲಿ ‘ಚೋಳಮಂಡಲಂ’ ಕಲಾಗ್ರಾಮ ನಿರ್ಮಿಸಿದೆವು. ಹಲವು ಕಲಾವಿದರಿಗೆ ಈ ಗ್ರಾಮ ನೆಲೆಯಾಗಿದೆ. ದೃಶ್ಯಕಲಾ ಕಾಲೇಜು ವಾತಾವರಣ ಕೂಡ ಚೇತೋಹಾರಿಯಾಗಿದೆ’ ಎಂದರು.</p>.<p>ಪ್ರಾಂಶುಪಾಲ ಸತೀಶ್ಕುಮಾರ್ ಪಿ.ವಲ್ಲೇಪುರೆ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಜೈರಾಜ ಎಂ.ಚಿಕ್ಕಪಾಟೀಲ, ಉಪನ್ಯಾಸಕ ಓಂಕಾರಮೂರ್ತಿ ಜಿ.ಬಿ., ಕಲಾವಿದ ಚಿ.ಸು. ಕೃಷ್ಣಸೆಟ್ಟಿ, ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ. ರಮೇಶ್, ನಿವೃತ್ತ ಪ್ರಾಂಶುಪಾಲ ರವೀಂದ್ರ ಕಮ್ಮಾರ, ಎಲ್.ಕೆ. ಹನುಮಂತಾಚಾರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-43-1818561935</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಕಲಾ ವಲಯದಲ್ಲಿ ಉತ್ಸಾಹಿಗಳ ಕೊರತೆ ಎದ್ದು ಕಾಣುತ್ತಿದೆ. ಸಂಘಟಿತ ಗುಂಪುಗಳು ಕಲಾಪಥವನ್ನು ಸುಭದ್ರವಾಗಿ ಮುನ್ನಡೆಸುವ ಅಗತ್ಯವಿದೆ ಎಂದು ‘ಆರ್ಟ್ ಪಾರ್ಕ್’ ಸಂಸ್ಥಾಪಕ ಕಲಾವಿದ ಎಸ್.ಜಿ. ವಾಸುದೇವ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ದೃಶ್ಯಕಲಾ ಕಾಲೇಜಿನಲ್ಲಿ ಆಯೋಜಿಸಿದ್ದ ‘ಆರ್ಟ್ ಪಾರ್ಕ್’ ಕಾರ್ಯ ಕ್ರಮದ 2ನೇ ದಿನವಾದ ಸೋಮವಾರ ನಡೆದ ಕಲಾ ಪ್ರಾತ್ಯಕ್ಷಿಕೆ ಮತ್ತು ಸಂವಾದದಲ್ಲಿ ಅವರು ಮಾತನಾಡಿದರು.</p>.<p>‘ಮದ್ರಾಸ್ ಸ್ಕೂಲ್ ಆಫ್ ಆರ್ಟ್ನಲ್ಲಿ ಶಿಕ್ಷಣ ಪೂರೈಸಿದ ಬಳಿಕ ಕಲಾ ಬದುಕನ್ನು ಸ್ವತಂತ್ರವಾಗಿ ಕಟ್ಟಿಕೊಂಡೆವು. ಕೆ.ಸಿ.ಎಸ್. ಪಣಿಕ್ಕರ್ ನೇತೃತ್ವದಲ್ಲಿ ‘ಚೋಳಮಂಡಲಂ’ ಕಲಾಗ್ರಾಮ ನಿರ್ಮಿಸಿದೆವು. ಹಲವು ಕಲಾವಿದರಿಗೆ ಈ ಗ್ರಾಮ ನೆಲೆಯಾಗಿದೆ. ದೃಶ್ಯಕಲಾ ಕಾಲೇಜು ವಾತಾವರಣ ಕೂಡ ಚೇತೋಹಾರಿಯಾಗಿದೆ’ ಎಂದರು.</p>.<p>ಪ್ರಾಂಶುಪಾಲ ಸತೀಶ್ಕುಮಾರ್ ಪಿ.ವಲ್ಲೇಪುರೆ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಜೈರಾಜ ಎಂ.ಚಿಕ್ಕಪಾಟೀಲ, ಉಪನ್ಯಾಸಕ ಓಂಕಾರಮೂರ್ತಿ ಜಿ.ಬಿ., ಕಲಾವಿದ ಚಿ.ಸು. ಕೃಷ್ಣಸೆಟ್ಟಿ, ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ. ರಮೇಶ್, ನಿವೃತ್ತ ಪ್ರಾಂಶುಪಾಲ ರವೀಂದ್ರ ಕಮ್ಮಾರ, ಎಲ್.ಕೆ. ಹನುಮಂತಾಚಾರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-43-1818561935</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>