<p>ದಾವಣಗೆರೆ: ಜಿಲ್ಲಾ ಸಾಹಿತ್ಯ ಸಮ್ಮೇಳನದ ರೀತಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಸಂತೆ ನಡೆಸಲು ಸರ್ಕಾರದಿಂದ ಅನುದಾನ ನೀಡಬೇಕು ಎಂದು ದಾವಣಗೆರೆ ಚಿತ್ರಕಲಾ ಪರಿಷತ್ತು ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ತು ಅಧ್ಯಕ್ಷ ಬಿ.ಎಲ್. ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>‘ರಾಜ್ಯದಾದ್ಯಂತ ಸಾಕಷ್ಟು ಸಂಖ್ಯೆಯ ಕಲಾವಿದರು ಇದ್ದಾರೆ. ಅವರನ್ನು ಸಂಘಟಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ಜಿಲ್ಲಾ ಮಟ್ಟದಲ್ಲಿ ಶಾಖೆಗಳನ್ನು ವಿಸ್ತರಿಸಬೇಕು. ಸಮ್ಮೇಳನ ನಡೆಸಿ ಹೊಸ ಪ್ರಯೋಗ ಸಾಧ್ಯತೆಯ ಬಗ್ಗೆ ಚಿಂತನ- ಮಂಥನ ನಡೆಸುವ ನಿಟ್ಟಿನಲ್ಲಿ ಯಾವುದೇ ಉಪಕ್ರಮವಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಸಹಾಯ ಹಸ್ತ ನೀಡಬೇಕು’ ಎಂದು ದಾವಣಗೆರೆ ಚಿತ್ರಕಲಾ ಪರಿಷತ್ತು ವತಿಯಿಂದ ಡಿ. ಶೇಷಾಚಲ ಮತ್ತು ಸದಾನಂದ ಹೆಗಡೆ ಅವರು ಮನವಿ ಮಾಡಿದರು.</p>.<p>ಮನವಿ ಸ್ವೀಕರಿಸಿದ ಬಿ.ಎಲ್. ಶಂಕರ್, ‘ಚಿತ್ರಕಲಾ ಪರಿಷತ್ತನ್ನು ವಿಸ್ತರಿಸಬೇಕು ಎಂಬ ನಿಟ್ಟಿನಲ್ಲಿ ಹುಬ್ಬಳ್ಳಿ, ಬೆಳಗಾವಿ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿಯೂ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಇನ್ನೂ ಅಂತಿಮ ತೀರ್ಮಾನವಾಗಿಲ್ಲ’ ಎಂದರು.</p>.<p>‘ಚಿತ್ರಸಂತೆ ನಡೆಸುವ ನಿಟ್ಟಿನಲ್ಲಿ ಸಹಾಯ ಮಾಡುವಂತೆ ಸರ್ಕಾರಕ್ಕೆ ಕಲಾವಿದರ ಪರವಾಗಿ ಮನವರಿಕೆ ಮಾಡಲು ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-43-1187737312</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಜಿಲ್ಲಾ ಸಾಹಿತ್ಯ ಸಮ್ಮೇಳನದ ರೀತಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಸಂತೆ ನಡೆಸಲು ಸರ್ಕಾರದಿಂದ ಅನುದಾನ ನೀಡಬೇಕು ಎಂದು ದಾವಣಗೆರೆ ಚಿತ್ರಕಲಾ ಪರಿಷತ್ತು ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ತು ಅಧ್ಯಕ್ಷ ಬಿ.ಎಲ್. ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>‘ರಾಜ್ಯದಾದ್ಯಂತ ಸಾಕಷ್ಟು ಸಂಖ್ಯೆಯ ಕಲಾವಿದರು ಇದ್ದಾರೆ. ಅವರನ್ನು ಸಂಘಟಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತು ಜಿಲ್ಲಾ ಮಟ್ಟದಲ್ಲಿ ಶಾಖೆಗಳನ್ನು ವಿಸ್ತರಿಸಬೇಕು. ಸಮ್ಮೇಳನ ನಡೆಸಿ ಹೊಸ ಪ್ರಯೋಗ ಸಾಧ್ಯತೆಯ ಬಗ್ಗೆ ಚಿಂತನ- ಮಂಥನ ನಡೆಸುವ ನಿಟ್ಟಿನಲ್ಲಿ ಯಾವುದೇ ಉಪಕ್ರಮವಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಸಹಾಯ ಹಸ್ತ ನೀಡಬೇಕು’ ಎಂದು ದಾವಣಗೆರೆ ಚಿತ್ರಕಲಾ ಪರಿಷತ್ತು ವತಿಯಿಂದ ಡಿ. ಶೇಷಾಚಲ ಮತ್ತು ಸದಾನಂದ ಹೆಗಡೆ ಅವರು ಮನವಿ ಮಾಡಿದರು.</p>.<p>ಮನವಿ ಸ್ವೀಕರಿಸಿದ ಬಿ.ಎಲ್. ಶಂಕರ್, ‘ಚಿತ್ರಕಲಾ ಪರಿಷತ್ತನ್ನು ವಿಸ್ತರಿಸಬೇಕು ಎಂಬ ನಿಟ್ಟಿನಲ್ಲಿ ಹುಬ್ಬಳ್ಳಿ, ಬೆಳಗಾವಿ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿಯೂ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಇನ್ನೂ ಅಂತಿಮ ತೀರ್ಮಾನವಾಗಿಲ್ಲ’ ಎಂದರು.</p>.<p>‘ಚಿತ್ರಸಂತೆ ನಡೆಸುವ ನಿಟ್ಟಿನಲ್ಲಿ ಸಹಾಯ ಮಾಡುವಂತೆ ಸರ್ಕಾರಕ್ಕೆ ಕಲಾವಿದರ ಪರವಾಗಿ ಮನವರಿಕೆ ಮಾಡಲು ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-43-1187737312</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>