<p>ಹಾಗಲವಾಡಿ (ಗುಬ್ಬಿ): ‘ಕಲೆಗಳನ್ನೇ ಜೀವಾಳವಾಗಿಸಿಕೊಂಡಿರುವ ಕಲಾವಿದರಿಗೆ ಸರ್ಕಾರವು ಅನುದಾನ ನೀಡಿ ಪ್ರೋತ್ಸಾಹಿಸಬೇಕಿದೆ. ಇಲ್ಲವಾದಲ್ಲಿ ನೆಲಮೂಲ ಸಂಸ್ಕೃತಿಯ ಕಲೆಗಳು ನಶಿಸಿ ಮುಂದಿನ ಪೀಳಿಗೆಗೆ ಕಲೆಗಳ ಪರಿಚಯವೇ ಇಲ್ಲವಾಗುತ್ತದೆ’ ಎಂದು ರಾಜ್ಯ ಕಲಾವಿದರ ಸಂಘದ ರಾಜ್ಯಾಧ್ಯಕ್ಷ ವೀರೇಶ್ ಪ್ರಸಾದ್ ಹೇಳಿದರು.</p>.<p>ಹಾಗಲವಾಡಿ ಹೋಬಳಿಯ ಹರಳಕಟ್ಟೆ ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಾನಪದ ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ರಾಜ್ಯದಾದ್ಯಂತ ವಿವಿಧ ಕಲಾ ತಂಡಗಳ ಪ್ರಾಯೋಜಿತ ಕಾರ್ಯಕ್ರಮದ ಹಣವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವುದು ದುರಾದೃಷ್ಟಕರ. ಇದರಿಂದ ಕಲಾ ತಂಡಗಳು ಹಾಗೂ ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದರು.</p>.<p>‘ಸರ್ಕಾರ ಪರಿಸ್ಥಿತಿ ಅರಿತು ಅನುದಾನ ಬಿಡುಗಡೆಗೊಳಿಸಬೇಕು. ಕಲಾವಿದರ ವಾದ್ಯ ಪರಿಕರ ಹಾಗೂ ವೇಷಭೂಷಣ ಖರೀದಿಗೆ ಅನುದಾನ ಹೆಚ್ಚಳ ಮಾಡಬೇಕು. ಸರ್ಕಾರವು ಕಲಾವಿದರ ಅನುದಾನ ಬಿಡುಗಡೆ ನಿರ್ಲಕ್ಷಿಸಿದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದರು.</p>.<p>‘ಕಲಾವಿದರು ಒಗ್ಗಟ್ಟಿನಿಂದ ಇದ್ದಲ್ಲಿ ಮಾತ್ರ ಸರ್ಕಾರದಿಂದ ಸಿಗುವ ಅನುದಾನವನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಲು ಸಾಧ್ಯ. ಜೊತೆಗೆ ಹೆಚ್ಚಿನ ಅನುದಾನ ಪಡೆದುಕೊಳ್ಳಲು ಒತ್ತಡ ಹಾಕಬಹುದು. ಈ ನಾಡಿನ ಅಮೂಲ್ಯ ಜಾನಪದ ಕಲೆಗಳನ್ನು ಉಳಿಸಿ ಮುಂದಿನ ಪೀಳಿಗೆಗೂ ಅವುಗಳನ್ನು ಕೊಂಡೊಯ್ಯುವ ಕೆಲಸವನ್ನು ಎಲ್ಲರೂ ಸೇರಿ ಮಾಡಬೇಕಿದೆ’ ಎಂದರು.</p>.<p>‘ಗ್ರಾಮೀಣ ನೆಲಮೂಲ ಸಂಸ್ಕೃತಿಯ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮದಲ್ಲಿ ಕಲಾತಂಡ ಕಟ್ಟಿಕೊಂಡಿದ್ದೇವೆ’ ಎಂದು ಕಲಾವಿದ ಈರಣ್ಣ ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗ್ರಾಮದ ಕಲಾವಿದರಿಗೆ ವಾದ್ಯ ಪರಿಕರ ಹಾಗೂ ವೇಷಭೂಷಣ ಖರೀದಿಗೆ ₹20 ಸಾವಿರ ಅನುದಾನ ನೀಡಲಾಯಿತು. ಜಾನಪದ, ಸಾಂಸ್ಕೃತಿಕ ವೈಭವದಲ್ಲಿ ಭಾಗವಹಿಸಿ ವಿಜೇತರಾದ ಕಲಾವಿದರಿಗೆ ಪ್ರಶಸ್ತಿ ನೀಡಲಾಯಿತು.</p>.<p>ಸಣ್ಣೀರಪ್ಪ, ಚಂದ್ರಯ್ಯ, ಶಿವಣ್ಣ, ಅಜ್ಜಯ್ಯ, ಹರೀಶ್, ಶೇಖರಪ್ಪ, ರಮೇಶ್, ಯೋಗೀಶ್, ಕಲಾವಿದರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-17-1591414476</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಗಲವಾಡಿ (ಗುಬ್ಬಿ): ‘ಕಲೆಗಳನ್ನೇ ಜೀವಾಳವಾಗಿಸಿಕೊಂಡಿರುವ ಕಲಾವಿದರಿಗೆ ಸರ್ಕಾರವು ಅನುದಾನ ನೀಡಿ ಪ್ರೋತ್ಸಾಹಿಸಬೇಕಿದೆ. ಇಲ್ಲವಾದಲ್ಲಿ ನೆಲಮೂಲ ಸಂಸ್ಕೃತಿಯ ಕಲೆಗಳು ನಶಿಸಿ ಮುಂದಿನ ಪೀಳಿಗೆಗೆ ಕಲೆಗಳ ಪರಿಚಯವೇ ಇಲ್ಲವಾಗುತ್ತದೆ’ ಎಂದು ರಾಜ್ಯ ಕಲಾವಿದರ ಸಂಘದ ರಾಜ್ಯಾಧ್ಯಕ್ಷ ವೀರೇಶ್ ಪ್ರಸಾದ್ ಹೇಳಿದರು.</p>.<p>ಹಾಗಲವಾಡಿ ಹೋಬಳಿಯ ಹರಳಕಟ್ಟೆ ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಾನಪದ ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ರಾಜ್ಯದಾದ್ಯಂತ ವಿವಿಧ ಕಲಾ ತಂಡಗಳ ಪ್ರಾಯೋಜಿತ ಕಾರ್ಯಕ್ರಮದ ಹಣವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವುದು ದುರಾದೃಷ್ಟಕರ. ಇದರಿಂದ ಕಲಾ ತಂಡಗಳು ಹಾಗೂ ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದರು.</p>.<p>‘ಸರ್ಕಾರ ಪರಿಸ್ಥಿತಿ ಅರಿತು ಅನುದಾನ ಬಿಡುಗಡೆಗೊಳಿಸಬೇಕು. ಕಲಾವಿದರ ವಾದ್ಯ ಪರಿಕರ ಹಾಗೂ ವೇಷಭೂಷಣ ಖರೀದಿಗೆ ಅನುದಾನ ಹೆಚ್ಚಳ ಮಾಡಬೇಕು. ಸರ್ಕಾರವು ಕಲಾವಿದರ ಅನುದಾನ ಬಿಡುಗಡೆ ನಿರ್ಲಕ್ಷಿಸಿದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದರು.</p>.<p>‘ಕಲಾವಿದರು ಒಗ್ಗಟ್ಟಿನಿಂದ ಇದ್ದಲ್ಲಿ ಮಾತ್ರ ಸರ್ಕಾರದಿಂದ ಸಿಗುವ ಅನುದಾನವನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಲು ಸಾಧ್ಯ. ಜೊತೆಗೆ ಹೆಚ್ಚಿನ ಅನುದಾನ ಪಡೆದುಕೊಳ್ಳಲು ಒತ್ತಡ ಹಾಕಬಹುದು. ಈ ನಾಡಿನ ಅಮೂಲ್ಯ ಜಾನಪದ ಕಲೆಗಳನ್ನು ಉಳಿಸಿ ಮುಂದಿನ ಪೀಳಿಗೆಗೂ ಅವುಗಳನ್ನು ಕೊಂಡೊಯ್ಯುವ ಕೆಲಸವನ್ನು ಎಲ್ಲರೂ ಸೇರಿ ಮಾಡಬೇಕಿದೆ’ ಎಂದರು.</p>.<p>‘ಗ್ರಾಮೀಣ ನೆಲಮೂಲ ಸಂಸ್ಕೃತಿಯ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮದಲ್ಲಿ ಕಲಾತಂಡ ಕಟ್ಟಿಕೊಂಡಿದ್ದೇವೆ’ ಎಂದು ಕಲಾವಿದ ಈರಣ್ಣ ತಿಳಿಸಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗ್ರಾಮದ ಕಲಾವಿದರಿಗೆ ವಾದ್ಯ ಪರಿಕರ ಹಾಗೂ ವೇಷಭೂಷಣ ಖರೀದಿಗೆ ₹20 ಸಾವಿರ ಅನುದಾನ ನೀಡಲಾಯಿತು. ಜಾನಪದ, ಸಾಂಸ್ಕೃತಿಕ ವೈಭವದಲ್ಲಿ ಭಾಗವಹಿಸಿ ವಿಜೇತರಾದ ಕಲಾವಿದರಿಗೆ ಪ್ರಶಸ್ತಿ ನೀಡಲಾಯಿತು.</p>.<p>ಸಣ್ಣೀರಪ್ಪ, ಚಂದ್ರಯ್ಯ, ಶಿವಣ್ಣ, ಅಜ್ಜಯ್ಯ, ಹರೀಶ್, ಶೇಖರಪ್ಪ, ರಮೇಶ್, ಯೋಗೀಶ್, ಕಲಾವಿದರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-17-1591414476</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>