<p>ಹರಿಹರ: ಬೆಂಗಳೂರಿನ ಕರುನಾಡು ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗವು ನಗರದ ಎಸ್.ಜೆ.ವಿ.ಪಿ. ಪದವಿ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಎಚ್.ಎ.ಭಿಕ್ಷಾವರ್ತಿ ಮಠ ಅವರಿಗೆ ‘ಕನ್ನಡ ಶಾಯರಿ ರತ್ನ’ ಪ್ರಶಸ್ತಿ ಪ್ರಕಟಿಸಿದೆ.</p>.<p>ಮೇ 25ರಂದು ಹಾವೇರಿಯ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ 2ನೇ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.</p>.<p>ಉರ್ದು ಶಾಯರಿಗಳ ರೂಪದಲ್ಲಿ ಕನ್ನಡ ಶಾಯರಿಗಳ ಸಂಗ್ರಹವಾದ ‘ಶಾಯರಿ ಲೋಕ’ ಎಂಬ ಕೃತಿಯನ್ನು ಇವರು ರಚಿಸಿದ್ದು, ಕೃತಿಯು ಈವರೆಗೆ 8 ಮುದ್ರಣ ಕಂಡಿದೆ. ಪ್ರಸ್ತುತ ಇವರು ರಾಣೆಬೆನ್ನೂರಿನ ಬಿ.ಎ.ಜೆ.ಎಸ್.ಎಸ್. ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-43-275875842</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ಬೆಂಗಳೂರಿನ ಕರುನಾಡು ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗವು ನಗರದ ಎಸ್.ಜೆ.ವಿ.ಪಿ. ಪದವಿ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಎಚ್.ಎ.ಭಿಕ್ಷಾವರ್ತಿ ಮಠ ಅವರಿಗೆ ‘ಕನ್ನಡ ಶಾಯರಿ ರತ್ನ’ ಪ್ರಶಸ್ತಿ ಪ್ರಕಟಿಸಿದೆ.</p>.<p>ಮೇ 25ರಂದು ಹಾವೇರಿಯ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ 2ನೇ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.</p>.<p>ಉರ್ದು ಶಾಯರಿಗಳ ರೂಪದಲ್ಲಿ ಕನ್ನಡ ಶಾಯರಿಗಳ ಸಂಗ್ರಹವಾದ ‘ಶಾಯರಿ ಲೋಕ’ ಎಂಬ ಕೃತಿಯನ್ನು ಇವರು ರಚಿಸಿದ್ದು, ಕೃತಿಯು ಈವರೆಗೆ 8 ಮುದ್ರಣ ಕಂಡಿದೆ. ಪ್ರಸ್ತುತ ಇವರು ರಾಣೆಬೆನ್ನೂರಿನ ಬಿ.ಎ.ಜೆ.ಎಸ್.ಎಸ್. ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-43-275875842</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>