<p>ಹುಬ್ಬಳ್ಳಿ: ‘ಕನ್ನಡ ಸಾಹಿತ್ಯ ಪರಿಷತ್ತಿಗೆ ಸಮಾನವಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಹೆಚ್ಚಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚುಟುವಟಿಕೆಗಳಿಗೆ ಅಗತ್ಯ ಸಹಕಾರ ಮತ್ತು ಸಹಾಯಧನ ನೀಡಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹೇಳಿದರು.</p>.<p>ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಕನಕದಾಸ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಕನಕದಾಸ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆದ ಪರಿಷತ್ತಿನ ಜಿಲ್ಲಾ 14ನೇ ಸಮ್ಮೇಳನ ಮತ್ತು ವಚನ ಗಾಯನ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘2025–26ನೇ ಸಾಲಿನಲ್ಲಿ ಸಾಹಿತ್ಯ, ಸಾಂಸ್ಕೃತಿಕ ಚುಟುವಟಿಕೆಗಳನ್ನು ಆಯೋಜಿಸಿದ್ದ ಜಿಲ್ಲೆಯ ನೋಂದಾಯಿತ 87 ಸಾಂಸ್ಕೃತಿಕ ಸಂಘ–ಸಂಸ್ಥೆಗಳಿಗೆ ಇಲಾಖೆಯಿಂದ ₹50 ಸಾವಿರದಿಂದ ₹2 ಲಕ್ಷದ ತನಕ ಸಹಾಯಧನ ನೀಡಲಾಗಿದೆ. ಚಿತ್ರಕಲಾ ಪ್ರದರ್ಶನ ನಡೆಸಿದ 14 ಚಿತ್ರಕಲಾವಿದರಿಗೂ ₹40 ಸಾವಿರ ತನಕ ಸಹಾಯಧನ ನೀಡಲಾಗಿದೆ’ ಎಂದರು.</p>.<p>‘ಸಾಹಿತ್ಯ, ಸಂಗೀತ, ಶಿಕ್ಷಣ ಹಾಗೂ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಧಾರವಾಡವು ರಾಜ್ಯದಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿನ ಅನೇಕ ಸಾಧಕರು ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಚುಟುಕು ಸಾಹಿತ್ಯ ಪರಿಷತ್ ಕೂಡ ತನ್ನ ಇತಿಮಿತಿಯೊಳಗೆ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ’ ಎಂದು ಬಣ್ಣಿಸಿದರು.</p>.<p>ಸಮ್ಮೇಳನದ ಅಧ್ಯಕ್ಷ, ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ ಮಾತನಾಡಿ, ‘ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಮುಂದುವರಿಸಬೇಕಿದೆ. ಇದರಿಂದ ಸಾಹಿತ್ಯ ಆಸಕ್ತಿ ಹಾಗೂ ಓದುವ ಸಂಸ್ಕೃತಿ ಹೆಚ್ಚುತ್ತದೆ. ಕಲಿಕೆ– ಓದು ನಮ್ಮ ಚಿಂತನೆಯನ್ನು ವೃದ್ಧಿಸುತ್ತವೆ’ ಎಂದರು.</p>.<p>‘ಚುಟುಕು ಬರಹ, ಕವನಗಳಲ್ಲಿ ಗಟ್ಟಿಯಾದ ವಿಚಾರಗಳಿರುತ್ತವೆ. ತೀಕ್ಷಣವಾದ ಬರಹದ ಮೂಲಕ ಸಮಾಜದ ಓರೆಕೋರೆಗಳನ್ನು ಪ್ರಸ್ತುತಪಡಿಸಲಾಗಿರುತ್ತದೆ. ಇವು ನೇರವಾಗಿ ಓದುಗನ ಮನಸ್ಸಿಗೆ ತಾಕುತ್ತವೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಪರಿಷತ್ತಿನ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಣ್ಣ ಕಡಿವಾಲ ಮಾತನಾಡಿ, ‘ಸಾಹಿತ್ಯ ಕೃತಿಗಳನ್ನು ಓದುವ ಮನಸ್ಸುಗಳು ಕಡಿಮೆ ಆಗಿವೆ. ಜನರಲ್ಲಿ ಸಾಹಿತ್ಯ ಅಭಿರುಚಿಯನ್ನು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ’ ಎಂದರು.</p>.<p>ಇದೇ ವೇಳೆ ಮಹಿಳೆಯರಿಗಾಗಿ ವಚನ ಗಾಯನ ಸ್ಪರ್ಧೆ ನಡೆಯಿತು. ಕವಿಗೋಷ್ಠಿ, ಕರೋಕೆ ಗಾಯನ ನಡೆಯಿತು. ‘ನಮ್ಮ ನಿಮ್ಮೆಲ್ಲರ ‘ಈತ’ ಶೀರ್ಷಿಕೆಯ ಕೆಸಿಕೆ ಸಂಸ್ಮರಣ ಸಂಚಿಕೆಯನ್ನು ಗಣ್ಯರು ಲೋಕಾರ್ಪಣೆ ಮಾಡಿದರು. ಪರಿಷತ್ತಿನ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ವಿ.ಜಿ.ಪಾಟೀಲ, ಪ್ರಮುಖರಾದ ಜಿ.ಎ.ಹೆಗಡೆ ಸೋಂದಾ, ಎಸ್.ಎಸ್.ಹುಲ್ಲೋಳಿ, ಚನ್ನಬಸಪ್ಪ ಧಾರವಾಡಶೆಟ್ರು, ಮೃತ್ಯುಂಜಯ ಮಟ್ಟಿ, ಪದ್ಮಜಾ ಉಮರ್ಜಿ, ಜಯಶ್ರೀ ಪಾಟೀಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-24-797763406</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಕನ್ನಡ ಸಾಹಿತ್ಯ ಪರಿಷತ್ತಿಗೆ ಸಮಾನವಾಗಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಹೆಚ್ಚಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚುಟುವಟಿಕೆಗಳಿಗೆ ಅಗತ್ಯ ಸಹಕಾರ ಮತ್ತು ಸಹಾಯಧನ ನೀಡಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹೇಳಿದರು.</p>.<p>ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಕನಕದಾಸ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಕನಕದಾಸ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆದ ಪರಿಷತ್ತಿನ ಜಿಲ್ಲಾ 14ನೇ ಸಮ್ಮೇಳನ ಮತ್ತು ವಚನ ಗಾಯನ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘2025–26ನೇ ಸಾಲಿನಲ್ಲಿ ಸಾಹಿತ್ಯ, ಸಾಂಸ್ಕೃತಿಕ ಚುಟುವಟಿಕೆಗಳನ್ನು ಆಯೋಜಿಸಿದ್ದ ಜಿಲ್ಲೆಯ ನೋಂದಾಯಿತ 87 ಸಾಂಸ್ಕೃತಿಕ ಸಂಘ–ಸಂಸ್ಥೆಗಳಿಗೆ ಇಲಾಖೆಯಿಂದ ₹50 ಸಾವಿರದಿಂದ ₹2 ಲಕ್ಷದ ತನಕ ಸಹಾಯಧನ ನೀಡಲಾಗಿದೆ. ಚಿತ್ರಕಲಾ ಪ್ರದರ್ಶನ ನಡೆಸಿದ 14 ಚಿತ್ರಕಲಾವಿದರಿಗೂ ₹40 ಸಾವಿರ ತನಕ ಸಹಾಯಧನ ನೀಡಲಾಗಿದೆ’ ಎಂದರು.</p>.<p>‘ಸಾಹಿತ್ಯ, ಸಂಗೀತ, ಶಿಕ್ಷಣ ಹಾಗೂ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಧಾರವಾಡವು ರಾಜ್ಯದಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿನ ಅನೇಕ ಸಾಧಕರು ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಚುಟುಕು ಸಾಹಿತ್ಯ ಪರಿಷತ್ ಕೂಡ ತನ್ನ ಇತಿಮಿತಿಯೊಳಗೆ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ’ ಎಂದು ಬಣ್ಣಿಸಿದರು.</p>.<p>ಸಮ್ಮೇಳನದ ಅಧ್ಯಕ್ಷ, ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ ಮಾತನಾಡಿ, ‘ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಮುಂದುವರಿಸಬೇಕಿದೆ. ಇದರಿಂದ ಸಾಹಿತ್ಯ ಆಸಕ್ತಿ ಹಾಗೂ ಓದುವ ಸಂಸ್ಕೃತಿ ಹೆಚ್ಚುತ್ತದೆ. ಕಲಿಕೆ– ಓದು ನಮ್ಮ ಚಿಂತನೆಯನ್ನು ವೃದ್ಧಿಸುತ್ತವೆ’ ಎಂದರು.</p>.<p>‘ಚುಟುಕು ಬರಹ, ಕವನಗಳಲ್ಲಿ ಗಟ್ಟಿಯಾದ ವಿಚಾರಗಳಿರುತ್ತವೆ. ತೀಕ್ಷಣವಾದ ಬರಹದ ಮೂಲಕ ಸಮಾಜದ ಓರೆಕೋರೆಗಳನ್ನು ಪ್ರಸ್ತುತಪಡಿಸಲಾಗಿರುತ್ತದೆ. ಇವು ನೇರವಾಗಿ ಓದುಗನ ಮನಸ್ಸಿಗೆ ತಾಕುತ್ತವೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಪರಿಷತ್ತಿನ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಣ್ಣ ಕಡಿವಾಲ ಮಾತನಾಡಿ, ‘ಸಾಹಿತ್ಯ ಕೃತಿಗಳನ್ನು ಓದುವ ಮನಸ್ಸುಗಳು ಕಡಿಮೆ ಆಗಿವೆ. ಜನರಲ್ಲಿ ಸಾಹಿತ್ಯ ಅಭಿರುಚಿಯನ್ನು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ’ ಎಂದರು.</p>.<p>ಇದೇ ವೇಳೆ ಮಹಿಳೆಯರಿಗಾಗಿ ವಚನ ಗಾಯನ ಸ್ಪರ್ಧೆ ನಡೆಯಿತು. ಕವಿಗೋಷ್ಠಿ, ಕರೋಕೆ ಗಾಯನ ನಡೆಯಿತು. ‘ನಮ್ಮ ನಿಮ್ಮೆಲ್ಲರ ‘ಈತ’ ಶೀರ್ಷಿಕೆಯ ಕೆಸಿಕೆ ಸಂಸ್ಮರಣ ಸಂಚಿಕೆಯನ್ನು ಗಣ್ಯರು ಲೋಕಾರ್ಪಣೆ ಮಾಡಿದರು. ಪರಿಷತ್ತಿನ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ವಿ.ಜಿ.ಪಾಟೀಲ, ಪ್ರಮುಖರಾದ ಜಿ.ಎ.ಹೆಗಡೆ ಸೋಂದಾ, ಎಸ್.ಎಸ್.ಹುಲ್ಲೋಳಿ, ಚನ್ನಬಸಪ್ಪ ಧಾರವಾಡಶೆಟ್ರು, ಮೃತ್ಯುಂಜಯ ಮಟ್ಟಿ, ಪದ್ಮಜಾ ಉಮರ್ಜಿ, ಜಯಶ್ರೀ ಪಾಟೀಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-24-797763406</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>