<p>ಚನ್ನಮ್ಮನ ಕಿತ್ತೂರು: ಸಂಸ್ಕೃತಿ, ಪರಂಪರೆ ಮತ್ತು ಆತ್ಮಗೌರವದ ಪ್ರತೀಕ ಕನ್ನಡ ಭಾಷೆಯಾಗಿದೆ. ಅದನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಹಿರಿದಾದ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದು ರಾಜಗುರು ಸಂಸ್ಥಾನ ಕಲ್ಮಠದ ಪೀಠಾಧಿಕಾರಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿಯ ಕಲ್ಮಠದ ಆವರಣದಲ್ಲಿರುವ ಶಂಕರ ಚಂದರಗಿ ಸಭಾಭವನದಲ್ಲಿ ಕಸಾಪದ 112ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮಂಗಳವಾರ ನಡೆದ ಕನ್ನಡ ಭಾಷೆ, ಮಾಧ್ಯಮದ ಉಳಿವು ಬೆಳವಣಿಗೆಯಲ್ಲಿ ಪರಿಷತ್ತಿನ ಪಾತ್ರ ಉಪನ್ಯಾಸ ಮತ್ತು ಸಾಧಕ ವಿದ್ಯಾರ್ಥಿಗಳ ಸತ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವೈ. ತುಬಾಕಿ ಮಾತನಾಡಿದರು.</p>.<p>ಕರ್ನಾಟಕ ರಕ್ಷಣಾ ಮಹಿಳಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷೆ ಮಂಜುಳಾ ಕಡಕೋಳ ಉಪನ್ಯಾಸ ನೀಡಿದರು. ಕ್ಷೇತ್ರ ಸಮನ್ವಯ ಅಧಿಕಾರಿ ಗಾಯತ್ರಿ ಅಜ್ಜನ್ನವರ ಮಾತನಾಡಿದರು.</p>.<p>ಎಸ್.ಎಸ್,ಎಲ್.ಸಿ ಪರೀಕ್ಷೆಯಲ್ಲಿ 623 ಅಂಕಗಳನ್ನು ಪಡೆದ ಸಂಜನಾ ಅವರಾದಿ, ರೋಷಿಣಿ ಎಮ್ಮಿ, 622 ಅಂಕ ಪಡೆದ ಅನನ್ಯಾ ನೇಸರಗಿ ಮತ್ತು 620 ಅಂಕಗಳನ್ನು ಪಡೆದ ಲಕ್ಷ್ಮೀ ಕೋಟಗಿ, ಅನು ಮೂಲಿಮನಿ ಅವರನ್ನು ಕಾರ್ಯಕ್ರಮದಲ್ಲಿ ಸತ್ಕರಿಸಲಾಯಿತು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಿ. ದಳವಾಯಿ ಅಧ್ಯಕ್ಷತೆ ವಹಿಸಿದ್ದರು. ನಾಗಯ್ಯ ಹುಲೆಪ್ಪನವರಮಠ, ಬಿ.ಸಿ.ಬಿದರಿ, ಮಂಜುನಾಥ ಕಳಸಣ್ಣವರ, ವಿ.ಎಸ್. ನಂದಿಹಳ್ಳಿ, ಮಹೇಶ್ವರ ಹೊಂಗಲ, ಶೀಲಾ ಗಂಗಾಧರಮಠ , ರಾಜೇಶ್ವರಿ ಕಳಸಣ್ಣವರ, ಕ್ಯೂರೇಟರ್ ರಾಘವೇಂದ್ರ, ಬಸವರಾಜ ದಳವಾಯಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-21-1004598988</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಮ್ಮನ ಕಿತ್ತೂರು: ಸಂಸ್ಕೃತಿ, ಪರಂಪರೆ ಮತ್ತು ಆತ್ಮಗೌರವದ ಪ್ರತೀಕ ಕನ್ನಡ ಭಾಷೆಯಾಗಿದೆ. ಅದನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಹಿರಿದಾದ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದು ರಾಜಗುರು ಸಂಸ್ಥಾನ ಕಲ್ಮಠದ ಪೀಠಾಧಿಕಾರಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿಯ ಕಲ್ಮಠದ ಆವರಣದಲ್ಲಿರುವ ಶಂಕರ ಚಂದರಗಿ ಸಭಾಭವನದಲ್ಲಿ ಕಸಾಪದ 112ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮಂಗಳವಾರ ನಡೆದ ಕನ್ನಡ ಭಾಷೆ, ಮಾಧ್ಯಮದ ಉಳಿವು ಬೆಳವಣಿಗೆಯಲ್ಲಿ ಪರಿಷತ್ತಿನ ಪಾತ್ರ ಉಪನ್ಯಾಸ ಮತ್ತು ಸಾಧಕ ವಿದ್ಯಾರ್ಥಿಗಳ ಸತ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವೈ. ತುಬಾಕಿ ಮಾತನಾಡಿದರು.</p>.<p>ಕರ್ನಾಟಕ ರಕ್ಷಣಾ ಮಹಿಳಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷೆ ಮಂಜುಳಾ ಕಡಕೋಳ ಉಪನ್ಯಾಸ ನೀಡಿದರು. ಕ್ಷೇತ್ರ ಸಮನ್ವಯ ಅಧಿಕಾರಿ ಗಾಯತ್ರಿ ಅಜ್ಜನ್ನವರ ಮಾತನಾಡಿದರು.</p>.<p>ಎಸ್.ಎಸ್,ಎಲ್.ಸಿ ಪರೀಕ್ಷೆಯಲ್ಲಿ 623 ಅಂಕಗಳನ್ನು ಪಡೆದ ಸಂಜನಾ ಅವರಾದಿ, ರೋಷಿಣಿ ಎಮ್ಮಿ, 622 ಅಂಕ ಪಡೆದ ಅನನ್ಯಾ ನೇಸರಗಿ ಮತ್ತು 620 ಅಂಕಗಳನ್ನು ಪಡೆದ ಲಕ್ಷ್ಮೀ ಕೋಟಗಿ, ಅನು ಮೂಲಿಮನಿ ಅವರನ್ನು ಕಾರ್ಯಕ್ರಮದಲ್ಲಿ ಸತ್ಕರಿಸಲಾಯಿತು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಬಿ. ದಳವಾಯಿ ಅಧ್ಯಕ್ಷತೆ ವಹಿಸಿದ್ದರು. ನಾಗಯ್ಯ ಹುಲೆಪ್ಪನವರಮಠ, ಬಿ.ಸಿ.ಬಿದರಿ, ಮಂಜುನಾಥ ಕಳಸಣ್ಣವರ, ವಿ.ಎಸ್. ನಂದಿಹಳ್ಳಿ, ಮಹೇಶ್ವರ ಹೊಂಗಲ, ಶೀಲಾ ಗಂಗಾಧರಮಠ , ರಾಜೇಶ್ವರಿ ಕಳಸಣ್ಣವರ, ಕ್ಯೂರೇಟರ್ ರಾಘವೇಂದ್ರ, ಬಸವರಾಜ ದಳವಾಯಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-21-1004598988</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>