<p>ಕೊಲ್ಹಾರ: ‘ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ಕನ್ನಡ ಪ್ರಾತಿನಿಧಿಕ ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡಿದ್ದು ಅತ್ಯಂತ ಶ್ಲಾಘನೀಯ’ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷ ದಯಾನಂದ ಹಿರೇಮಠ ಅಭಿಪ್ರಾಯಪಟ್ಟರು.</p>.<p>ಕಲಗುರ್ಕಿ ಬಾಪೂಜಿ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>ಕಲಗುರ್ಕಿ ಗ್ರಾಮದ ಮುಖಂಡ ಸಂಗಪ್ಪ ದೇಸಾಯಿ ಮಾತನಾಡಿ, ‘ಕನ್ನಡ ನಾಡು– ನುಡಿ, ನೆಲ– ಜಲ ಹಾಗೂ ಸಂಸ್ಕೃತಿ– ಪರಂಪರೆ ಎರಡುನೂರು ವರ್ಷದ ಇತಿಹಾಸ ಹೊಂದಿದೆ. ಕನ್ನಡ ಭಾಷೆಯ ಅಭಿಮಾನ ಮೂಡಿಸುವಂತಹ ವಿಶೇಷ ಕಾರ್ಯಕ್ರಮ ನೀಡಬೇಕು’ ಎಂದರು.</p>.<p>ಜಾನಪದ ಕಲಾವಿದ ದುಂಡಪ್ಪ ಪಾರಗೊಂಡ ಮಾತನಾಡಿ, ‘ಹಳೆಗನ್ನಡ, ನಡುಗನ್ನಡ, ಹೊಸಗನ್ನಡ ಕವಿಗಳ, ಲೇಖಕರ ಕುರಿತು ಸಂಶೋಧನೆಗಳು ಜರುಗಬೇಕು. ಭಾಷೆ ಉಳಿದರೆ ಮಾತ್ರ ನಾವು ಕನ್ನಡಿಗರಾಗಲು ಸಾಧ್ಯ’ ಎಂದರು.</p>.<p>ಕಸಾಪ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಮಹಾದೇವಪ್ಪ ಘೋರ್ಪಡೆ, ಶ್ರೀಕಾಂತ ಹಿರೇಮಠ, ಅರವಿಂದ ಬಿರಾದಾರ, ರಾಮು ಬಾಗೇವಾಡಿ, ಮುತ್ತು ಪವಾರ, ಬಸವರಾಜ ಬಿರಾದಾರ, ಜಿ.ಎಸ್. ಬಳ್ಳೂರ, ಮಹಾದೇವಿ ತೆಲಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-26-981413554</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಲ್ಹಾರ: ‘ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ಕನ್ನಡ ಪ್ರಾತಿನಿಧಿಕ ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡಿದ್ದು ಅತ್ಯಂತ ಶ್ಲಾಘನೀಯ’ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷ ದಯಾನಂದ ಹಿರೇಮಠ ಅಭಿಪ್ರಾಯಪಟ್ಟರು.</p>.<p>ಕಲಗುರ್ಕಿ ಬಾಪೂಜಿ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>ಕಲಗುರ್ಕಿ ಗ್ರಾಮದ ಮುಖಂಡ ಸಂಗಪ್ಪ ದೇಸಾಯಿ ಮಾತನಾಡಿ, ‘ಕನ್ನಡ ನಾಡು– ನುಡಿ, ನೆಲ– ಜಲ ಹಾಗೂ ಸಂಸ್ಕೃತಿ– ಪರಂಪರೆ ಎರಡುನೂರು ವರ್ಷದ ಇತಿಹಾಸ ಹೊಂದಿದೆ. ಕನ್ನಡ ಭಾಷೆಯ ಅಭಿಮಾನ ಮೂಡಿಸುವಂತಹ ವಿಶೇಷ ಕಾರ್ಯಕ್ರಮ ನೀಡಬೇಕು’ ಎಂದರು.</p>.<p>ಜಾನಪದ ಕಲಾವಿದ ದುಂಡಪ್ಪ ಪಾರಗೊಂಡ ಮಾತನಾಡಿ, ‘ಹಳೆಗನ್ನಡ, ನಡುಗನ್ನಡ, ಹೊಸಗನ್ನಡ ಕವಿಗಳ, ಲೇಖಕರ ಕುರಿತು ಸಂಶೋಧನೆಗಳು ಜರುಗಬೇಕು. ಭಾಷೆ ಉಳಿದರೆ ಮಾತ್ರ ನಾವು ಕನ್ನಡಿಗರಾಗಲು ಸಾಧ್ಯ’ ಎಂದರು.</p>.<p>ಕಸಾಪ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಮಹಾದೇವಪ್ಪ ಘೋರ್ಪಡೆ, ಶ್ರೀಕಾಂತ ಹಿರೇಮಠ, ಅರವಿಂದ ಬಿರಾದಾರ, ರಾಮು ಬಾಗೇವಾಡಿ, ಮುತ್ತು ಪವಾರ, ಬಸವರಾಜ ಬಿರಾದಾರ, ಜಿ.ಎಸ್. ಬಳ್ಳೂರ, ಮಹಾದೇವಿ ತೆಲಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-26-981413554</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>