<p>ಕೊಲ್ಹಾರ: ಪ್ರತಿ ವರ್ಷದಂತೆ ಈ ವರ್ಷವೂ ದಿಗಂಬರೇಶ್ವರ ಮಠದ ಜಾತ್ರಾ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಠದ ಪರಮ ಪೂಜ್ಯ ಕಲ್ಲಿನಾಥ ಸ್ವಾಮೀಜಿ ಹೇಳಿದರು</p>.<p>ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ಏ 1ರಂದು ಬುಧವಾರ ಸಂಜೆ 5.30ಕ್ಕೆ ಐತಿಹಾಸಿಕ ರೊಟ್ಟಿ ಜಾತ್ರೆ ನಡೆಯಲಿದೆ. ಸಂಜೆ 6 ಗಂಟೆಗೆ ಬಾಗಲಕೋಟ ಜಿಲ್ಲೆಯ ಶಿರೂರದಿಂದ ಸಿದ್ದಲಿಂಗ ಶಿವಯೋಗಿ ಹಾಗೂ ಕಲ್ಲಪ್ಪಯ್ಯ ಶಿವಯೋಗಿಗಳ ಚಿತ್ರದ ಮೆರವಣಿಗೆ ಹೊರಟು ಪಟ್ಟಣಕ್ಕೆ ಸಂಜೆ 7 ಗಂಟೆಗೆ ಆಗಮಿಸಿ ಜಾತ್ರೆಗೆ ಚಾಲನೆ ದೊರೆಯಲಿದೆ ಎಂದರು.</p>.<p>ಏ. 2ರಂದು ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವದ ಕಳಸದ ಮೆರವಣಿಗೆ ಜರಗಲಿದೆ. ಅದೇ ದಿನ ಸಂಜೆ 5.30ಕ್ಕೆ ಮಹಾರಥೋತ್ಸವ ಜರುಗುವುದು. ಪ್ರತಿ ದಿನ ವಿವಿಧ ಕಾರ್ಯಕ್ರಮಗಳಿದ್ದು ಏ. 6ರಂದು ಸಂಜೆ 5 ಗಂಟೆಗೆ ದಿಗಂಬರೇಶ್ವರ ರಥೋತ್ಸವದ ಕಳಸ ಇಳಿಸುವುದರೊಂದಿಗೆ ಜಾತ್ರೆ ಮಂಗಲಗೊಳ್ಳುವುದು ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-26-1005901309</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಲ್ಹಾರ: ಪ್ರತಿ ವರ್ಷದಂತೆ ಈ ವರ್ಷವೂ ದಿಗಂಬರೇಶ್ವರ ಮಠದ ಜಾತ್ರಾ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಠದ ಪರಮ ಪೂಜ್ಯ ಕಲ್ಲಿನಾಥ ಸ್ವಾಮೀಜಿ ಹೇಳಿದರು</p>.<p>ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ಏ 1ರಂದು ಬುಧವಾರ ಸಂಜೆ 5.30ಕ್ಕೆ ಐತಿಹಾಸಿಕ ರೊಟ್ಟಿ ಜಾತ್ರೆ ನಡೆಯಲಿದೆ. ಸಂಜೆ 6 ಗಂಟೆಗೆ ಬಾಗಲಕೋಟ ಜಿಲ್ಲೆಯ ಶಿರೂರದಿಂದ ಸಿದ್ದಲಿಂಗ ಶಿವಯೋಗಿ ಹಾಗೂ ಕಲ್ಲಪ್ಪಯ್ಯ ಶಿವಯೋಗಿಗಳ ಚಿತ್ರದ ಮೆರವಣಿಗೆ ಹೊರಟು ಪಟ್ಟಣಕ್ಕೆ ಸಂಜೆ 7 ಗಂಟೆಗೆ ಆಗಮಿಸಿ ಜಾತ್ರೆಗೆ ಚಾಲನೆ ದೊರೆಯಲಿದೆ ಎಂದರು.</p>.<p>ಏ. 2ರಂದು ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವದ ಕಳಸದ ಮೆರವಣಿಗೆ ಜರಗಲಿದೆ. ಅದೇ ದಿನ ಸಂಜೆ 5.30ಕ್ಕೆ ಮಹಾರಥೋತ್ಸವ ಜರುಗುವುದು. ಪ್ರತಿ ದಿನ ವಿವಿಧ ಕಾರ್ಯಕ್ರಮಗಳಿದ್ದು ಏ. 6ರಂದು ಸಂಜೆ 5 ಗಂಟೆಗೆ ದಿಗಂಬರೇಶ್ವರ ರಥೋತ್ಸವದ ಕಳಸ ಇಳಿಸುವುದರೊಂದಿಗೆ ಜಾತ್ರೆ ಮಂಗಲಗೊಳ್ಳುವುದು ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-26-1005901309</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>