<p>ಮಡಿಕೇರಿ: ಸಮೂಹ ನೃತ್ಯ, ಹಾಡುಗಾರಿಕೆ, ನಾಟಕ, ಏಕ ಪಾತ್ರಾಭಿನಯ, ರಂಗೋಲಿ, ಫಯರ್ ಲೆಸ್ ಕುಕ್ಕಿಂಗ್, ಚರ್ಚಾ ಕೂಟ ಹೀಗೆ ಒಂದಾದ ಮೇಲೆ ಒಂದರಂತೆ ವೇದಿಕೆ ಮೇಲೆ ಕಾರ್ಯಕ್ರಮಗಳು ಜರುಗುತ್ತಿದ್ದರೆ ಪ್ರೇಕ್ಷಕರು ತದೇಕಚಿತ್ತದಿಂದ ವೀಕ್ಷಿಸಿದರು.</p>.<p>ಈ ದೃಶ್ಯಗಳು ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಶನಿವಾರ ನಡೆದ ಪ್ರತಿಭಾನ್ವೇಷಣೆಯ ಕಲೆಯ ಹಬ್ಬ ‘ಕಲಾ ವೈಭವ’ದಲ್ಲಿ ಕಂಡು ಬಂತು. ಇದರಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡು ಗಮನ ಸೆಳೆದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ., ‘ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿಯಾಗಿದೆ. ಕಲೆಯ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಕಾಲೇಜು ವಿದ್ಯಾರ್ಥಿ ಸಂಘದ ಸಂಚಾಲಕ ಡಾ.ಶ್ರೀಧರ್ ಹೆಗಡೆ ಮಾತನಾಡಿ, ‘ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಯ ‘ಕಲಾ ವೈಭವ’ ಕಾರ್ಯಕ್ರಮದ ಆಯೋಜನೆ ಇತರರಿಗೆ ಮಾದರಿಯಾಗಿದೆ ಮತ್ತು ಹೆಮ್ಮೆಯ ವಿಚಾರವಾಗಿದೆ’ ಎಂದು ಶ್ಲಾಘಿಸಿದರು.</p>.<p>‘ಇಂತಹ ವೇದಿಕೆಗಳ ಮೂಲಕ ಕೌಶಲ್ಯವನ್ನು ಇತರರಿಗೂ ಪರಿಚಯಿಸಿ ಮುಂದಿನ ಪೀಳಿಗೆಗೂ ಇದನ್ನು ಹಸ್ತಾಂತರಿಸಬೇಕು ಎಂದು ಸಲಹೆ ನೀಡಿದರು ಮಾತ್ರವಲ್ಲ, ಕಲಾ ವಿಭಾಗದ ವಿದ್ಯಾರ್ಥಿಗಳು ಶೈಕ್ಷಣಿಕ ಕೀಳರಿಮೆ ಹೊಂದದೆ ಉನ್ನತ ಸಾಧನೆ ಮಾಡಬೇಕು’ ಎಂದರು.</p>.<p>ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಡಾ.ಕೃಷ್ಣ ಮಾತನಾಡಿ, ‘ಕಾಲೇಜು ಪ್ರಗತಿ ಪಥದಲ್ಲಿ ಸಾಗಲು ಇಂತಹ ಕಾರ್ಯಕ್ರಮಗಳು ಸಹಕಾರಿ’ ಎಂದರು.</p>.<p>ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ನಯನ ಕಶ್ಯಪ್ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರತಿಬಿಂಬಿಸಲು ಸೂಕ್ತ ವೇದಿಕೆಯ ಅಗತ್ಯವಿರುತ್ತದೆ, ಕೆಲವೊಮ್ಮೆ ವೇದಿಕೆ ಸಿಗದೆ ವಿದ್ಯಾರ್ಥಿಗಳು ವಂಚಿತರಾಗುತ್ತಾರೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಪ್ರತಿಭೆಗಳಿಗೆ ಜೀವ ಕಳೆ ತುಂಬಿದಂತಾಗುತ್ತದೆ’ ಎಂದರು.</p>.<p>ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ತಿಪ್ಪೇಸ್ವಾಮಿ, ಕಾರ್ಯಕ್ರಮದ ಸಂಚಾಲಕಿ ಎ.ಎನ್.ಗಾಯತ್ರಿ, ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಎಂ.ಪಿ.ಡೀನಾ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಎ.ಎನ್.ಮೋನಿಕಾ, ಸೂಕ್ಷ್ಮಾಣು ವಿಭಾಗದ ಉಪನ್ಯಾಸಕಿ ಸೌಮ್ಯ ಕೃಷ್ಣಮೂರ್ತಿ, ಭೂಗೋಳ ವಿಭಾಗದ ಉಪನ್ಯಾಸಕಿ ಬೈರವಿ, ವಿದ್ಯಾರ್ಥಿ ಸಂಘಟನೆಯ ಸಂಚಾಲಕಿ ಟಿ.ವಿ.ವರ್ಷ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-51-1575197636</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಸಮೂಹ ನೃತ್ಯ, ಹಾಡುಗಾರಿಕೆ, ನಾಟಕ, ಏಕ ಪಾತ್ರಾಭಿನಯ, ರಂಗೋಲಿ, ಫಯರ್ ಲೆಸ್ ಕುಕ್ಕಿಂಗ್, ಚರ್ಚಾ ಕೂಟ ಹೀಗೆ ಒಂದಾದ ಮೇಲೆ ಒಂದರಂತೆ ವೇದಿಕೆ ಮೇಲೆ ಕಾರ್ಯಕ್ರಮಗಳು ಜರುಗುತ್ತಿದ್ದರೆ ಪ್ರೇಕ್ಷಕರು ತದೇಕಚಿತ್ತದಿಂದ ವೀಕ್ಷಿಸಿದರು.</p>.<p>ಈ ದೃಶ್ಯಗಳು ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಶನಿವಾರ ನಡೆದ ಪ್ರತಿಭಾನ್ವೇಷಣೆಯ ಕಲೆಯ ಹಬ್ಬ ‘ಕಲಾ ವೈಭವ’ದಲ್ಲಿ ಕಂಡು ಬಂತು. ಇದರಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡು ಗಮನ ಸೆಳೆದರು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಮೇಜರ್ ಪ್ರೊ.ರಾಘವ ಬಿ., ‘ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿಯಾಗಿದೆ. ಕಲೆಯ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಕಾಲೇಜು ವಿದ್ಯಾರ್ಥಿ ಸಂಘದ ಸಂಚಾಲಕ ಡಾ.ಶ್ರೀಧರ್ ಹೆಗಡೆ ಮಾತನಾಡಿ, ‘ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಯ ‘ಕಲಾ ವೈಭವ’ ಕಾರ್ಯಕ್ರಮದ ಆಯೋಜನೆ ಇತರರಿಗೆ ಮಾದರಿಯಾಗಿದೆ ಮತ್ತು ಹೆಮ್ಮೆಯ ವಿಚಾರವಾಗಿದೆ’ ಎಂದು ಶ್ಲಾಘಿಸಿದರು.</p>.<p>‘ಇಂತಹ ವೇದಿಕೆಗಳ ಮೂಲಕ ಕೌಶಲ್ಯವನ್ನು ಇತರರಿಗೂ ಪರಿಚಯಿಸಿ ಮುಂದಿನ ಪೀಳಿಗೆಗೂ ಇದನ್ನು ಹಸ್ತಾಂತರಿಸಬೇಕು ಎಂದು ಸಲಹೆ ನೀಡಿದರು ಮಾತ್ರವಲ್ಲ, ಕಲಾ ವಿಭಾಗದ ವಿದ್ಯಾರ್ಥಿಗಳು ಶೈಕ್ಷಣಿಕ ಕೀಳರಿಮೆ ಹೊಂದದೆ ಉನ್ನತ ಸಾಧನೆ ಮಾಡಬೇಕು’ ಎಂದರು.</p>.<p>ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಡಾ.ಕೃಷ್ಣ ಮಾತನಾಡಿ, ‘ಕಾಲೇಜು ಪ್ರಗತಿ ಪಥದಲ್ಲಿ ಸಾಗಲು ಇಂತಹ ಕಾರ್ಯಕ್ರಮಗಳು ಸಹಕಾರಿ’ ಎಂದರು.</p>.<p>ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ನಯನ ಕಶ್ಯಪ್ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರತಿಬಿಂಬಿಸಲು ಸೂಕ್ತ ವೇದಿಕೆಯ ಅಗತ್ಯವಿರುತ್ತದೆ, ಕೆಲವೊಮ್ಮೆ ವೇದಿಕೆ ಸಿಗದೆ ವಿದ್ಯಾರ್ಥಿಗಳು ವಂಚಿತರಾಗುತ್ತಾರೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಪ್ರತಿಭೆಗಳಿಗೆ ಜೀವ ಕಳೆ ತುಂಬಿದಂತಾಗುತ್ತದೆ’ ಎಂದರು.</p>.<p>ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ತಿಪ್ಪೇಸ್ವಾಮಿ, ಕಾರ್ಯಕ್ರಮದ ಸಂಚಾಲಕಿ ಎ.ಎನ್.ಗಾಯತ್ರಿ, ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಎಂ.ಪಿ.ಡೀನಾ, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಎ.ಎನ್.ಮೋನಿಕಾ, ಸೂಕ್ಷ್ಮಾಣು ವಿಭಾಗದ ಉಪನ್ಯಾಸಕಿ ಸೌಮ್ಯ ಕೃಷ್ಣಮೂರ್ತಿ, ಭೂಗೋಳ ವಿಭಾಗದ ಉಪನ್ಯಾಸಕಿ ಬೈರವಿ, ವಿದ್ಯಾರ್ಥಿ ಸಂಘಟನೆಯ ಸಂಚಾಲಕಿ ಟಿ.ವಿ.ವರ್ಷ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-51-1575197636</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>