<p>ಶಿವಮೊಗ್ಗ: ‘ಜಗತ್ತು ದ್ವೇಷ ಅಸೂಯೆಗಳ ಅಗ್ನಿಕುಂಡದಲ್ಲಿ ಬೇಯುತ್ತಿರುವ ಈ ಹೊತ್ತಿನಲ್ಲಿ ವಿವೇಕವುಳ್ಳ ಸಮಾಜ ನಿರ್ಮಾಣದ ಅಗತ್ಯವಿದೆ. ತುರ್ತಾಗಿ ಬೇಕಿ ರುವ ದಯೆಯನ್ನು ಸೃಷ್ಟಿಸುವ ಸಾಂಸ್ಕೃತಿಕ ಜಗತ್ತನ್ನು ಕಟ್ಟುವತ್ತ ನಾವೆಲ್ಲಾ ಚಿಂತನೆ ನಡೆಸಬೇಕಿದೆ’ ಎಂದು ತುಮಕೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವ ಮೋಹನ ಚಂದ್ರಗುತ್ತಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜು ಸಂಯುಕ್ತವಾಗಿ ಆಯೋಜಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳ ‘ಕನ್ನಡ ನುಡಿ ಉತ್ಸವ’ವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಭಾಷೆ, ಜಾತಿ, ಧರ್ಮದ ಹೆಸರಲ್ಲಿ ಅಸಹನೆ ಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಬದುಕುತ್ತಿರುವ ಮಕ್ಕಳನ್ನು ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನ ಕಡೆಗೆ ನಡೆಸಬೇಕಿದೆ. ಮನಸ್ಸುಗಳನ್ನು ಕಟ್ಟುವ ಕಾಯಕದಿಂದ ಮಾತ್ರ ಇದು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.</p>.<p>‘ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಮೊಬೈಲ್ ಫೋನ್ ಕಸಿದುಕೊಂಡಿದೆ. ಅದು ಅವರ ಮನಸ್ಸಿನಲ್ಲಿ ದ್ವೇಷ ಮತ್ತು ಅಸಹನೆ ತುಂಬುತ್ತಿದೆ. ಬಹುಬೇಗ ಉದ್ವಿಗ್ನಗೊಳ್ಳುವ ಮನಃಸ್ಥಿತಿ ಅವರಲ್ಲಿ ಬೆಳೆಯುತ್ತಿದೆ. ಸಾಂಸ್ಕೃತಿಕವಾಗಿ ಮನಸ್ಸನ್ನು ಜಾಗೃತಗೊಳಿಸುವುದೇ ಇದಕ್ಕಿರುವ ಪರಿಹಾರ’ ಎಂದು ಹೇಳಿದರು.</p>.<p>‘ನಮ್ಮ ಜೀವನ ಕ್ರಮದಲ್ಲಿಯೇ ನಮ್ಮ ಸಂಸ್ಕೃತಿ ಹಾಸುಹೊಕ್ಕಾಗಿದೆ. ನಮ್ಮ ಸಾಂಸ್ಕೃತಿಕ ಆಚರಣೆಗಳ ಮೇಲೆ ಅನೇಕ ದಾಳಿಗಳು ಆಗಿವೆ. ಆದರೆ ಅವುಗಳನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಾಗಿಲ್ಲ. ಬದಲಾಗಿ ಮತ್ತಷ್ಟು ಗಟ್ಟಿಯಾಗಿವೆ’ ಎಂದು ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.</p>.<p>ಕಾಲೇಜಿನ ಪ್ರಾಚಾರ್ಯ ಎಸ್. ಶಶಿಧರ್ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಅಣ್ಣಪ್ಪ ಎನ್. ಮಳೀಮಠ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಸಂಚಾಲಕಿ ವಿದ್ಯಾ ಮರಿಯಾ ಜೋಸೆಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-42-671414532</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ಜಗತ್ತು ದ್ವೇಷ ಅಸೂಯೆಗಳ ಅಗ್ನಿಕುಂಡದಲ್ಲಿ ಬೇಯುತ್ತಿರುವ ಈ ಹೊತ್ತಿನಲ್ಲಿ ವಿವೇಕವುಳ್ಳ ಸಮಾಜ ನಿರ್ಮಾಣದ ಅಗತ್ಯವಿದೆ. ತುರ್ತಾಗಿ ಬೇಕಿ ರುವ ದಯೆಯನ್ನು ಸೃಷ್ಟಿಸುವ ಸಾಂಸ್ಕೃತಿಕ ಜಗತ್ತನ್ನು ಕಟ್ಟುವತ್ತ ನಾವೆಲ್ಲಾ ಚಿಂತನೆ ನಡೆಸಬೇಕಿದೆ’ ಎಂದು ತುಮಕೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವ ಮೋಹನ ಚಂದ್ರಗುತ್ತಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜು ಸಂಯುಕ್ತವಾಗಿ ಆಯೋಜಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳ ‘ಕನ್ನಡ ನುಡಿ ಉತ್ಸವ’ವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಭಾಷೆ, ಜಾತಿ, ಧರ್ಮದ ಹೆಸರಲ್ಲಿ ಅಸಹನೆ ಹೆಚ್ಚುತ್ತಿರುವ ಕಾಲಘಟ್ಟದಲ್ಲಿ ಬದುಕುತ್ತಿರುವ ಮಕ್ಕಳನ್ನು ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನ ಕಡೆಗೆ ನಡೆಸಬೇಕಿದೆ. ಮನಸ್ಸುಗಳನ್ನು ಕಟ್ಟುವ ಕಾಯಕದಿಂದ ಮಾತ್ರ ಇದು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.</p>.<p>‘ವಿದ್ಯಾರ್ಥಿಗಳ ಸೃಜನಶೀಲತೆಯನ್ನು ಮೊಬೈಲ್ ಫೋನ್ ಕಸಿದುಕೊಂಡಿದೆ. ಅದು ಅವರ ಮನಸ್ಸಿನಲ್ಲಿ ದ್ವೇಷ ಮತ್ತು ಅಸಹನೆ ತುಂಬುತ್ತಿದೆ. ಬಹುಬೇಗ ಉದ್ವಿಗ್ನಗೊಳ್ಳುವ ಮನಃಸ್ಥಿತಿ ಅವರಲ್ಲಿ ಬೆಳೆಯುತ್ತಿದೆ. ಸಾಂಸ್ಕೃತಿಕವಾಗಿ ಮನಸ್ಸನ್ನು ಜಾಗೃತಗೊಳಿಸುವುದೇ ಇದಕ್ಕಿರುವ ಪರಿಹಾರ’ ಎಂದು ಹೇಳಿದರು.</p>.<p>‘ನಮ್ಮ ಜೀವನ ಕ್ರಮದಲ್ಲಿಯೇ ನಮ್ಮ ಸಂಸ್ಕೃತಿ ಹಾಸುಹೊಕ್ಕಾಗಿದೆ. ನಮ್ಮ ಸಾಂಸ್ಕೃತಿಕ ಆಚರಣೆಗಳ ಮೇಲೆ ಅನೇಕ ದಾಳಿಗಳು ಆಗಿವೆ. ಆದರೆ ಅವುಗಳನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಾಗಿಲ್ಲ. ಬದಲಾಗಿ ಮತ್ತಷ್ಟು ಗಟ್ಟಿಯಾಗಿವೆ’ ಎಂದು ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.</p>.<p>ಕಾಲೇಜಿನ ಪ್ರಾಚಾರ್ಯ ಎಸ್. ಶಶಿಧರ್ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ಅಣ್ಣಪ್ಪ ಎನ್. ಮಳೀಮಠ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಸಂಚಾಲಕಿ ವಿದ್ಯಾ ಮರಿಯಾ ಜೋಸೆಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-42-671414532</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>