<p>ಸಿದ್ದಾಪುರ: ‘ಪಾಶ್ಚಾತ್ಯ ಸಂಸ್ಕೃತಿಯತ್ತ ಯುವ ಪೀಳಿಗೆ ಆಕರ್ಷಿತರಾಗುತ್ತಿರುವ ಇಂದಿನ ಕಾಲದಲ್ಲಿ ಜಾನಪದ ಕಲೆ ಹಾಗೂ ನಮ್ಮ ಸಂಸ್ಕೃತಿಯನ್ನು ಪ್ರೋತ್ಸಾಹಿಸಿ ಉಳಿಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ಪ್ರಗತಿಪರ ಕೃಷಿಕ ಚಂದ್ರಶೇಖರ ನರಸಿಂಹ ಹೆಗಡೆ ಹೊನ್ನೆಹದ್ದ ಹೇಳಿದರು.</p>.<p>ತಾಲ್ಲೂಕಿನ ಹಾರ್ಸಿಕಟ್ಟಾ ಸಮೀಪದ ಹೊನ್ನೆಹದ್ದದ ಶ್ರೀ ಮಾವಿನಕಟ್ಟೆ ಭೂತೇಶ್ವರ ಸ್ವಾಮಿಯ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕಡೆವಿನ ಕೋಲಾಟ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.</p>.<p>ಉಪನ್ಯಾಸಕ ಎನ್.ಟಿ.ನಾಯ್ಕ ದೇವಾಸ ಮಾತನಾಡಿ, ‘ಜಾನಪದ ಕಲೆಗಳು ಉಳಿಯಬೇಕಾದರೆ ಸಂಘಟನೆ ಅವಶ್ಯ ಎಂದರು.</p>.<p>ನಾಟಿ ವೈದ್ಯ ಕೆ.ಟಿ.ಗೌಡ ಮಾದಲಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿದ್ರಕಾನ ಗ್ರಾಮ ಪಂಚಾಯಿತಿ ನಿಕಟಪೂರ್ವ ಸದಸ್ಯೆ ಮಮತಾ ನಾರಾಯಣ ಚನ್ನಯ್ಯ, ನಾರಾಯಣ ಸ್ವಾಮಿ ಕೊಳಗಿಜಡ್ಡಿ, ನಿರ್ಣಾಯಕ ಶ್ರೀನಿವಾಸ, ಭೂತೇಶ್ವರ ಸಮಿತಿಯ ಮಂಜುನಾಥ ಹೊನ್ನೆಹದ್ದ ಉಪಸ್ಥಿತರಿದ್ದರು.</p>.<p>ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ ಹೆಗಡೆ ಹಾರ್ಸಿಮನೆ ಕಾರ್ಯಕ್ರಮ ನಿರೂಪಿಸಿದರು. ಭೂತೇಶ್ವರ ಸ್ವಾಮಿ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.</p>.<p>ಕಡೆವಿನ ಕೋಲಾಟ ಪ್ರದರ್ಶನದಲ್ಲಿ ಮಾರುತಿ ಅಂಬೇಡ್ಕರ್ ಯುವಕ ಸಂಘ ಹೆಚ್ಚೆ ಪ್ರಥಮ ಹಾಗೂ ಭೂತೇಶ್ವರ ಗೆಳೆಯರ ಬಳಗ ಉಂಚಳ್ಳಿ ದ್ವಿತೀಯ ಬಹುಮಾನ ಪಡೆದುಕೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-20-162743552</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿದ್ದಾಪುರ: ‘ಪಾಶ್ಚಾತ್ಯ ಸಂಸ್ಕೃತಿಯತ್ತ ಯುವ ಪೀಳಿಗೆ ಆಕರ್ಷಿತರಾಗುತ್ತಿರುವ ಇಂದಿನ ಕಾಲದಲ್ಲಿ ಜಾನಪದ ಕಲೆ ಹಾಗೂ ನಮ್ಮ ಸಂಸ್ಕೃತಿಯನ್ನು ಪ್ರೋತ್ಸಾಹಿಸಿ ಉಳಿಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ಪ್ರಗತಿಪರ ಕೃಷಿಕ ಚಂದ್ರಶೇಖರ ನರಸಿಂಹ ಹೆಗಡೆ ಹೊನ್ನೆಹದ್ದ ಹೇಳಿದರು.</p>.<p>ತಾಲ್ಲೂಕಿನ ಹಾರ್ಸಿಕಟ್ಟಾ ಸಮೀಪದ ಹೊನ್ನೆಹದ್ದದ ಶ್ರೀ ಮಾವಿನಕಟ್ಟೆ ಭೂತೇಶ್ವರ ಸ್ವಾಮಿಯ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕಡೆವಿನ ಕೋಲಾಟ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.</p>.<p>ಉಪನ್ಯಾಸಕ ಎನ್.ಟಿ.ನಾಯ್ಕ ದೇವಾಸ ಮಾತನಾಡಿ, ‘ಜಾನಪದ ಕಲೆಗಳು ಉಳಿಯಬೇಕಾದರೆ ಸಂಘಟನೆ ಅವಶ್ಯ ಎಂದರು.</p>.<p>ನಾಟಿ ವೈದ್ಯ ಕೆ.ಟಿ.ಗೌಡ ಮಾದಲಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿದ್ರಕಾನ ಗ್ರಾಮ ಪಂಚಾಯಿತಿ ನಿಕಟಪೂರ್ವ ಸದಸ್ಯೆ ಮಮತಾ ನಾರಾಯಣ ಚನ್ನಯ್ಯ, ನಾರಾಯಣ ಸ್ವಾಮಿ ಕೊಳಗಿಜಡ್ಡಿ, ನಿರ್ಣಾಯಕ ಶ್ರೀನಿವಾಸ, ಭೂತೇಶ್ವರ ಸಮಿತಿಯ ಮಂಜುನಾಥ ಹೊನ್ನೆಹದ್ದ ಉಪಸ್ಥಿತರಿದ್ದರು.</p>.<p>ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ ಹೆಗಡೆ ಹಾರ್ಸಿಮನೆ ಕಾರ್ಯಕ್ರಮ ನಿರೂಪಿಸಿದರು. ಭೂತೇಶ್ವರ ಸ್ವಾಮಿ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.</p>.<p>ಕಡೆವಿನ ಕೋಲಾಟ ಪ್ರದರ್ಶನದಲ್ಲಿ ಮಾರುತಿ ಅಂಬೇಡ್ಕರ್ ಯುವಕ ಸಂಘ ಹೆಚ್ಚೆ ಪ್ರಥಮ ಹಾಗೂ ಭೂತೇಶ್ವರ ಗೆಳೆಯರ ಬಳಗ ಉಂಚಳ್ಳಿ ದ್ವಿತೀಯ ಬಹುಮಾನ ಪಡೆದುಕೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-20-162743552</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>