<p>ಸಿಂದಗಿ: ಮಹಾಶಿವಶರಣೆ ಅಕ್ಕಮಹಾದೇವಿ ರಚಿಸಿದ ವಚನಗಳಲ್ಲಿ ಈಗ 354 ವಚನಗಳು ಲಭ್ಯವಾಗಿವೆ. ಅವರು ಕನ್ನಡದ ಪ್ರಥಮ ಕವಯತ್ರಿಯಾಗಿದ್ದಾರೆ ಎಂದು ಜಗದೇವಿ ಬಿರಾದಾರ ಹೇಳಿದರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ಮಹಾಶಿವರಣೆ ಅಕ್ಕಮಹಾದೇವಿ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ವಕೀಲೆ ಬಿ.ಜಿ. ಮಾನ್ವಿ ಮಾತನಾಡಿ, ವೈರಾಗ್ಯನಿಧಿ ಅಕ್ಕಮಹಾದೇವಿ ಆಧ್ಯಾತ್ಮಿಕತೆಗೆ ಹೊಸ ಭಾಷ್ಯ ಬರೆದರು. ಲೌಕಿಕ ಜಗತ್ತನ್ನು ಧಿಕ್ಕರಿಸಿದರು ಎಂದು ತಿಳಿಸಿದರು.</p>.<p>ಅಕ್ಕಮಹಾದೇವಿ ವಚನಗಳನ್ನು ಶಿಕ್ಷಕಿ ಸೈನಾಬಿ ಮಸಳಿ ಗಾಯನ ರೂಪದಲ್ಲಿ ಪ್ರಸ್ತುತಪಡಿಸಿದರು. ಮಹಾನಂದ ಬಮ್ಮಣ್ಣಿ, ಸುನಂದಾ ಯಂಪೂರೆ, ಶಿಕ್ಷಕಿ ಶೋಭಾ ಚಿಗರಿ, ಅನುಸೂಯ ಪಾರಗೊಂಡ, ವರ್ಷಾ ಪಾಟೀಲ ಮಾತನಾಡಿದರು.</p>.<p>ಕ.ಸಾ.ಪ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಸಿ.ಮಯೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ.ಸಾ.ಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಆನಂದ ಶಾಬಾದಿ, ಯಂಕಪ್ಪ ನಾಟೀಕಾರ, ರಾಗರಂಜಿನಿ ಸಂಗೀತ ಅಕಾಡೆಮಿ ಸಂಚಾಲಕ ಪ್ರಕಾಶ ಮೂಡಲಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-26-207195729</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂದಗಿ: ಮಹಾಶಿವಶರಣೆ ಅಕ್ಕಮಹಾದೇವಿ ರಚಿಸಿದ ವಚನಗಳಲ್ಲಿ ಈಗ 354 ವಚನಗಳು ಲಭ್ಯವಾಗಿವೆ. ಅವರು ಕನ್ನಡದ ಪ್ರಥಮ ಕವಯತ್ರಿಯಾಗಿದ್ದಾರೆ ಎಂದು ಜಗದೇವಿ ಬಿರಾದಾರ ಹೇಳಿದರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ಮಹಾಶಿವರಣೆ ಅಕ್ಕಮಹಾದೇವಿ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ವಕೀಲೆ ಬಿ.ಜಿ. ಮಾನ್ವಿ ಮಾತನಾಡಿ, ವೈರಾಗ್ಯನಿಧಿ ಅಕ್ಕಮಹಾದೇವಿ ಆಧ್ಯಾತ್ಮಿಕತೆಗೆ ಹೊಸ ಭಾಷ್ಯ ಬರೆದರು. ಲೌಕಿಕ ಜಗತ್ತನ್ನು ಧಿಕ್ಕರಿಸಿದರು ಎಂದು ತಿಳಿಸಿದರು.</p>.<p>ಅಕ್ಕಮಹಾದೇವಿ ವಚನಗಳನ್ನು ಶಿಕ್ಷಕಿ ಸೈನಾಬಿ ಮಸಳಿ ಗಾಯನ ರೂಪದಲ್ಲಿ ಪ್ರಸ್ತುತಪಡಿಸಿದರು. ಮಹಾನಂದ ಬಮ್ಮಣ್ಣಿ, ಸುನಂದಾ ಯಂಪೂರೆ, ಶಿಕ್ಷಕಿ ಶೋಭಾ ಚಿಗರಿ, ಅನುಸೂಯ ಪಾರಗೊಂಡ, ವರ್ಷಾ ಪಾಟೀಲ ಮಾತನಾಡಿದರು.</p>.<p>ಕ.ಸಾ.ಪ ತಾಲ್ಲೂಕು ಘಟಕದ ಅಧ್ಯಕ್ಷ ವೈ.ಸಿ.ಮಯೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ.ಸಾ.ಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಆನಂದ ಶಾಬಾದಿ, ಯಂಕಪ್ಪ ನಾಟೀಕಾರ, ರಾಗರಂಜಿನಿ ಸಂಗೀತ ಅಕಾಡೆಮಿ ಸಂಚಾಲಕ ಪ್ರಕಾಶ ಮೂಡಲಗಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-26-207195729</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>